ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯದ ಸಹಯೋಗದಲ್ಲಿ ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ಆನ್ಲೈನ್ನಲ್ಲಿ ನಡೆಯುವ ದೇವಿಸ್ತುತಿ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ಮುಳಿಯ ಜೇಸಿ ಹಾಲ್ನಲ್ಲಿ ನೆರವೇರಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಕಾಮತ್ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮುಳಿಯ ಜ್ಯುವೆಲ್ಸ್ ನಿರ್ದೇಶಕರಾದ ಕೃಷ್ಣನಾರಾಯಣ ಮುಳಿಯ ಅವರ ಮಾತನಾಡಿ, ನಮ್ಮ ಧಾರ್ಮಿಕ ಸನಾತನ ಸಂಸ್ಕೃತಿಯ ಆಚಾರ ವಿಚಾರಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮುಂದಿನ ಪೀಳಿಗೆಗಳಿಗೂ ಧರ್ಮ-ಸಂಸ್ಕೃತಿಯ ಅರಿವು ಜಾಗೃತವಾಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಬೇಕಾಗಿದೆ ಎಂದು ಹೇಳಿ, ಶುಭಹಾರೈಸಿದರು. ಅತಿಥಿಗಳಾಗಿ ವೇದಿಕೆಯಲ್ಲಿ ಮುಳಿಯ ಜ್ಯುವೆಲ್ಸ್ ನ ಎಚ್ಆರ್ ಶ್ಯಾಮ್ಮೂರ್ತಿ, ಆನ್ಲೈನ್ ಸೇಲ್ಸ್ ವಿಭಾಗದ ಲತಾ ಯತೀಶ್ ಉಪಸ್ಥಿತರಿದ್ದರು.ರೇಡಿಯೋ ಪಾಂಚಜನ್ಯದ ಕಾರ್ಯದರ್ಶಿಗಳಾದ ಪದ್ಮಾ ಕೆ.ಆರ್. ಆಚಾರ್ಯ ಸ್ವಾಗತಿಸಿದರು. ಆನ್ಲೈನ್ ದೇವಿಸ್ತುತಿ ಗಾಯನ ಸ್ರ್ಪೆಯಲ್ಲಿ 122 ಸ್ಪರ್ಧಾಳುಗಳು ನೋಂದಣಿ ಮಾಡಿ ಭಾಗವಹಿಸಿರುತ್ತಾರೆ. ತೀರ್ಪುಗಾರರಾಗಿ ವಿದುಷಿ ಪ್ರೀತಿಕಲಾ ಮತ್ತು ತನ್ವಿ ಡಿ.ಐ ಸಹಕರಿಸಿದರು. ರೇಡಿಯೋ ಪಾಂಚಜನ್ಯದ ಸಂಯೋಜಕಿ ತೇಜಸ್ವಿ ರಾಜೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…