ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯದ ಸಹಯೋಗದಲ್ಲಿ ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ಆನ್ಲೈನ್ನಲ್ಲಿ ನಡೆಯುವ ದೇವಿಸ್ತುತಿ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ಮುಳಿಯ ಜೇಸಿ ಹಾಲ್ನಲ್ಲಿ ನೆರವೇರಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಕಾಮತ್ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮುಳಿಯ ಜ್ಯುವೆಲ್ಸ್ ನಿರ್ದೇಶಕರಾದ ಕೃಷ್ಣನಾರಾಯಣ ಮುಳಿಯ ಅವರ ಮಾತನಾಡಿ, ನಮ್ಮ ಧಾರ್ಮಿಕ ಸನಾತನ ಸಂಸ್ಕೃತಿಯ ಆಚಾರ ವಿಚಾರಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮುಂದಿನ ಪೀಳಿಗೆಗಳಿಗೂ ಧರ್ಮ-ಸಂಸ್ಕೃತಿಯ ಅರಿವು ಜಾಗೃತವಾಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಬೇಕಾಗಿದೆ ಎಂದು ಹೇಳಿ, ಶುಭಹಾರೈಸಿದರು. ಅತಿಥಿಗಳಾಗಿ ವೇದಿಕೆಯಲ್ಲಿ ಮುಳಿಯ ಜ್ಯುವೆಲ್ಸ್ ನ ಎಚ್ಆರ್ ಶ್ಯಾಮ್ಮೂರ್ತಿ, ಆನ್ಲೈನ್ ಸೇಲ್ಸ್ ವಿಭಾಗದ ಲತಾ ಯತೀಶ್ ಉಪಸ್ಥಿತರಿದ್ದರು.ರೇಡಿಯೋ ಪಾಂಚಜನ್ಯದ ಕಾರ್ಯದರ್ಶಿಗಳಾದ ಪದ್ಮಾ ಕೆ.ಆರ್. ಆಚಾರ್ಯ ಸ್ವಾಗತಿಸಿದರು. ಆನ್ಲೈನ್ ದೇವಿಸ್ತುತಿ ಗಾಯನ ಸ್ರ್ಪೆಯಲ್ಲಿ 122 ಸ್ಪರ್ಧಾಳುಗಳು ನೋಂದಣಿ ಮಾಡಿ ಭಾಗವಹಿಸಿರುತ್ತಾರೆ. ತೀರ್ಪುಗಾರರಾಗಿ ವಿದುಷಿ ಪ್ರೀತಿಕಲಾ ಮತ್ತು ತನ್ವಿ ಡಿ.ಐ ಸಹಕರಿಸಿದರು. ರೇಡಿಯೋ ಪಾಂಚಜನ್ಯದ ಸಂಯೋಜಕಿ ತೇಜಸ್ವಿ ರಾಜೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…