ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯದ ಸಹಯೋಗದಲ್ಲಿ ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ಆನ್ಲೈನ್ನಲ್ಲಿ ನಡೆಯುವ ದೇವಿಸ್ತುತಿ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ಮುಳಿಯ ಜೇಸಿ ಹಾಲ್ನಲ್ಲಿ ನೆರವೇರಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಕಾಮತ್ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮುಳಿಯ ಜ್ಯುವೆಲ್ಸ್ ನಿರ್ದೇಶಕರಾದ ಕೃಷ್ಣನಾರಾಯಣ ಮುಳಿಯ ಅವರ ಮಾತನಾಡಿ, ನಮ್ಮ ಧಾರ್ಮಿಕ ಸನಾತನ ಸಂಸ್ಕೃತಿಯ ಆಚಾರ ವಿಚಾರಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮುಂದಿನ ಪೀಳಿಗೆಗಳಿಗೂ ಧರ್ಮ-ಸಂಸ್ಕೃತಿಯ ಅರಿವು ಜಾಗೃತವಾಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಬೇಕಾಗಿದೆ ಎಂದು ಹೇಳಿ, ಶುಭಹಾರೈಸಿದರು. ಅತಿಥಿಗಳಾಗಿ ವೇದಿಕೆಯಲ್ಲಿ ಮುಳಿಯ ಜ್ಯುವೆಲ್ಸ್ ನ ಎಚ್ಆರ್ ಶ್ಯಾಮ್ಮೂರ್ತಿ, ಆನ್ಲೈನ್ ಸೇಲ್ಸ್ ವಿಭಾಗದ ಲತಾ ಯತೀಶ್ ಉಪಸ್ಥಿತರಿದ್ದರು.ರೇಡಿಯೋ ಪಾಂಚಜನ್ಯದ ಕಾರ್ಯದರ್ಶಿಗಳಾದ ಪದ್ಮಾ ಕೆ.ಆರ್. ಆಚಾರ್ಯ ಸ್ವಾಗತಿಸಿದರು. ಆನ್ಲೈನ್ ದೇವಿಸ್ತುತಿ ಗಾಯನ ಸ್ರ್ಪೆಯಲ್ಲಿ 122 ಸ್ಪರ್ಧಾಳುಗಳು ನೋಂದಣಿ ಮಾಡಿ ಭಾಗವಹಿಸಿರುತ್ತಾರೆ. ತೀರ್ಪುಗಾರರಾಗಿ ವಿದುಷಿ ಪ್ರೀತಿಕಲಾ ಮತ್ತು ತನ್ವಿ ಡಿ.ಐ ಸಹಕರಿಸಿದರು. ರೇಡಿಯೋ ಪಾಂಚಜನ್ಯದ ಸಂಯೋಜಕಿ ತೇಜಸ್ವಿ ರಾಜೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…