ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯದ ಸಹಯೋಗದಲ್ಲಿ ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ಆನ್ಲೈನ್ನಲ್ಲಿ ನಡೆಯುವ ದೇವಿಸ್ತುತಿ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ಮುಳಿಯ ಜೇಸಿ ಹಾಲ್ನಲ್ಲಿ ನೆರವೇರಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಕಾಮತ್ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮುಳಿಯ ಜ್ಯುವೆಲ್ಸ್ ನಿರ್ದೇಶಕರಾದ ಕೃಷ್ಣನಾರಾಯಣ ಮುಳಿಯ ಅವರ ಮಾತನಾಡಿ, ನಮ್ಮ ಧಾರ್ಮಿಕ ಸನಾತನ ಸಂಸ್ಕೃತಿಯ ಆಚಾರ ವಿಚಾರಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮುಂದಿನ ಪೀಳಿಗೆಗಳಿಗೂ ಧರ್ಮ-ಸಂಸ್ಕೃತಿಯ ಅರಿವು ಜಾಗೃತವಾಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಬೇಕಾಗಿದೆ ಎಂದು ಹೇಳಿ, ಶುಭಹಾರೈಸಿದರು. ಅತಿಥಿಗಳಾಗಿ ವೇದಿಕೆಯಲ್ಲಿ ಮುಳಿಯ ಜ್ಯುವೆಲ್ಸ್ ನ ಎಚ್ಆರ್ ಶ್ಯಾಮ್ಮೂರ್ತಿ, ಆನ್ಲೈನ್ ಸೇಲ್ಸ್ ವಿಭಾಗದ ಲತಾ ಯತೀಶ್ ಉಪಸ್ಥಿತರಿದ್ದರು.ರೇಡಿಯೋ ಪಾಂಚಜನ್ಯದ ಕಾರ್ಯದರ್ಶಿಗಳಾದ ಪದ್ಮಾ ಕೆ.ಆರ್. ಆಚಾರ್ಯ ಸ್ವಾಗತಿಸಿದರು. ಆನ್ಲೈನ್ ದೇವಿಸ್ತುತಿ ಗಾಯನ ಸ್ರ್ಪೆಯಲ್ಲಿ 122 ಸ್ಪರ್ಧಾಳುಗಳು ನೋಂದಣಿ ಮಾಡಿ ಭಾಗವಹಿಸಿರುತ್ತಾರೆ. ತೀರ್ಪುಗಾರರಾಗಿ ವಿದುಷಿ ಪ್ರೀತಿಕಲಾ ಮತ್ತು ತನ್ವಿ ಡಿ.ಐ ಸಹಕರಿಸಿದರು. ರೇಡಿಯೋ ಪಾಂಚಜನ್ಯದ ಸಂಯೋಜಕಿ ತೇಜಸ್ವಿ ರಾಜೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…