ಸುದ್ದಿಗಳು

ಮುಳಿಯ ಗೋವಿಹಾರದಲ್ಲಿ ಗೋವಿನ ಉತ್ಪನ್ನಗಳ ತಯಾರಿಕಾ ಕಾರ್ಯಾಗಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಳಿಯ ಗೋವಿಹಾರ ಆಶ್ರಯದಲ್ಲಿ ಹಾಗೂ ಗೋಫಲ ಟ್ರಸ್ಟ್ ನೇತೃತ್ವದಲ್ಲಿ ‘ಅರಿಯೋಣ ಬನ್ನಿ ಗೋಜನ್ಯ ಉತ್ಪನ್ನಗಳನ್ನು’ – ಗೋವು ಆಧಾರಿತ ಉತ್ಪನ್ನಗಳ ತಯಾರಿಕಾ ಕಾರ್ಯಗಾರ  ಪುತ್ತೂರಿನ ಕಬಕ ಸಮೀಪದ ಓಜಾಲದಲ್ಲಿರುವ ಮುಳಿಯ ಗೋವಿಹಾರದಲ್ಲಿ ಆಯೋಜಿಸಲಾಗಿತ್ತು.

Advertisement
Advertisement
ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಗೋಫಲ ಟ್ರಸ್ಟ್ ನ ಟ್ರಸ್ಟಿ ಕೇಶವ ಪ್ರಸಾದ್ ಮುಳಿಯ ಅವರು ದೀಪೋಜ್ವಲನ ಮಾಡಿ ನಮ್ಮಲ್ಲಿ ಗೋವಿನ ಮಹತ್ವ, ಗೋವಿನಿಂದ ತಯಾರಾಗುವ ಗೋಜನ್ಯ ಉತ್ಪನ್ನಗಳು ನಮ್ಮ ಆರೋಗ್ಯಕ್ಕೆ ಹೇಗೆ ಪೂರಕವಾಗಿರುತ್ತದೆ ಎಂದು ತಮ್ಮ ಅನುಭವ ಹಂಚಿಕೊಳ್ಳುವುದರೊಂದಿಗೆ ಗೋವಿನ ರಕ್ಷಣೆ ಮತ್ತು ಗೋಶಾಲೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಫಲ ಟ್ರಸ್ಟ್ ನ  ಅಧ್ಯಕ್ಷರಾದ ಕೊಂಕೋಡಿ ಪದ್ಮನಾಭ ಭಟ್ ಮಾತನಾಡಿ ಪ್ರತಿಯೊಬ್ಬರು ಗೋವುಗಳನ್ನು ಸಾಕಲು ಮನಸ್ಸು ಮಾಡಬೇಕು, ಪ್ರತಿಯೊಂದು ಮನೆಯಲ್ಲಿ ಗೋವುಗಳನ್ನು ಸಾಕಬೇಕು. ಈಗಿನ ಕಾಲಘಟ್ಟದಲ್ಲಿ ಗೋವುಗಳನ್ನು ಸಾಕಲು ಜನರು ಹೆದರುತ್ತಾರೆ. ಗೋ ಸಾಕಾಣೆಯೂ ಲಾಭದಾಯಕ. ನಾವು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ಬೆಳೆಸುತ್ತಾ ಗೋಶಾಲೆಗಳನ್ನು ಕೂಡ ಬೆಳೆಸಬೇಕು ಎಂದು ಹೇಳಿದರು.

ಕೃಷಿಕರಾದ ಪ್ರಶಾಂತ್ ರೈ ಕೈಕಾರ್ ರವರು ಪ್ರಾಸ್ತಾವಿಕ ಮಾತನ್ನಾಡಿ ಗೋವುಗಳ ಮಹತ್ವ ಗೋ ಉತ್ತನ್ನ ತಯಾರಿಕಾ ಕಾರ್ಯಾಗಾರದ ಅವಶ್ಯಕತೆಗಳನ್ನು ಹೇಳಿದರು.
ಗೋವಿಹಾರ ಅಧ್ಯಕ್ಷರಾದ ಕೃಷ್ಣನಾರಾಯಣ ಮುಳಿಯ ಮಾತನಾಡಿ ಗೋವಿನಿಂದಾಗುವ ಪ್ರಯೋಜನಗಳು ಮತ್ತು ಮುಳಿಯ ಗೋವಿಹಾರದ ಬಗ್ಗೆ ವಿಶೇಷ ಮಾಹಿತಿ, ಹಾಗೂ ಕಾರ್ಯಾಗಾರದ ಉಪಯುಕ್ತತೆ ಬಗ್ಗೆ ವಿವರಿಸಿದರು.
Advertisement
ಸಂಪನ್ಮೂಲ ವ್ಯಕ್ತಿಗಳಾಗಿ ಉಮೇಶ್ ಕುಲಕರ್ಣಿ, ಡಾ. ಎಮ್ ಯದುಕುಮಾರ್, ಉದಯ್ ಶಂಕರ್, ಕೆ.ಟಿ ವೆಂಕಟೇಶ್, ಭಾಸ್ಕರ್ ರಾವ್ ಉಬರಡ್ಕ, ಜಯಗುರು ಆಚಾರ್ಯ ಹಿಂದಾರು ಭಾಗವಹಿಸಿದ್ದರು.
ಗೋವಿನಿಂದಾಗಿ ಮನುಷ್ಯರಿಗೆ ದಿನನಿತ್ಯ ಬಳಕೆಯಾಗುವ ದಂತಮಂಜನ್, ಸೋಪು, ದೂಪಬತ್ತಿ, ಹಣತೆ, ವಿಭೂತಿ, ಬೆರಣಿ, ಧೂಪ, ಸ್ವರ್ಗಸಾರ, ಗೋನಂದಾಜಲ, ಎರೆಹುಳ ಗೊಬ್ಬರ, ಗಣಪತಿ ವಿಗ್ರಹ, ಅಮೃತ್ ಮಲಂ ಅಲ್ಲದೆ ಇತರ ಸೌಂದರ್ಯವರ್ಧಕ ಸಾಮಾಗ್ರಿಗಳು, ಕೃಷಿ ಭೂಮಿಗೆ ಬೇಕಾಗುವ ಜೀವಾಮೃತ, ಕೀಟ ನಿಯಂತ್ರಕ, ಜೀವಾಮೃತ ಔಷಧಿಗಳನ್ನು ತಯಾರಿಸುವ ವಿಧಾನವನ್ನು ಈ ಶಿಬಿರದಲ್ಲಿ ಕಲಿಸಿಕೊಡಲಾಯಿತು.
ಕಾರ್ಯಕ್ರಮವನ್ನು ಶಿವಪ್ರಸಾದ್ ನಿರೂಪಿಸಿದರು. ಮುಳಿಯ ಗೋವಿಹಾರದ ಉಸ್ತುವಾರಿ ಸದಾಶಿವ ಸ್ವಾಗತಿಸಿದರು. ಮುಳಿಯ ಗೋವಿಹಾರ ಸದಸ್ಯೆ ಅಶ್ವಿನಿಕೃಷ್ಣ ಮುಳಿಯ ಪ್ರಾರ್ಥಿಸಿದರು. ಶಂಕರ್ ಧನ್ಯವಾದಗೈದರು. ಕೋಕೋ ಗುರು ಮಾಲಕ ಸಂತೋಷ್, ಗೊಲೆಕ್ಸ್ ಕೃಷ್ಣಮೋಹನ್, ದಿನೇಶ್ ಪ್ರಸನ್ನ ಕರಿಯಾಳ, ಇಶಾ ಸುಲೋಚನಾ ಮುಳಿಯ ಮುಂತಾದವರು ಭಾಗವಹಿಸಿದ್ದರು. ಗೋಫಲ ಟ್ರಸ್ಟ್ ನ ಜನರಲ್ ಮ್ಯಾನೇಜರ್ ಬಾಲಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

2 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

4 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

9 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

10 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

15 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

17 hours ago