Advertisement
ಸುದ್ದಿಗಳು

ಮುಳಿಯ ಗೋವಿಹಾರದಲ್ಲಿ ಗೋವಿನ ಉತ್ಪನ್ನಗಳ ತಯಾರಿಕಾ ಕಾರ್ಯಾಗಾರ

Share

ಮುಳಿಯ ಗೋವಿಹಾರ ಆಶ್ರಯದಲ್ಲಿ ಹಾಗೂ ಗೋಫಲ ಟ್ರಸ್ಟ್ ನೇತೃತ್ವದಲ್ಲಿ ‘ಅರಿಯೋಣ ಬನ್ನಿ ಗೋಜನ್ಯ ಉತ್ಪನ್ನಗಳನ್ನು’ – ಗೋವು ಆಧಾರಿತ ಉತ್ಪನ್ನಗಳ ತಯಾರಿಕಾ ಕಾರ್ಯಗಾರ  ಪುತ್ತೂರಿನ ಕಬಕ ಸಮೀಪದ ಓಜಾಲದಲ್ಲಿರುವ ಮುಳಿಯ ಗೋವಿಹಾರದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಗೋಫಲ ಟ್ರಸ್ಟ್ ನ ಟ್ರಸ್ಟಿ ಕೇಶವ ಪ್ರಸಾದ್ ಮುಳಿಯ ಅವರು ದೀಪೋಜ್ವಲನ ಮಾಡಿ ನಮ್ಮಲ್ಲಿ ಗೋವಿನ ಮಹತ್ವ, ಗೋವಿನಿಂದ ತಯಾರಾಗುವ ಗೋಜನ್ಯ ಉತ್ಪನ್ನಗಳು ನಮ್ಮ ಆರೋಗ್ಯಕ್ಕೆ ಹೇಗೆ ಪೂರಕವಾಗಿರುತ್ತದೆ ಎಂದು ತಮ್ಮ ಅನುಭವ ಹಂಚಿಕೊಳ್ಳುವುದರೊಂದಿಗೆ ಗೋವಿನ ರಕ್ಷಣೆ ಮತ್ತು ಗೋಶಾಲೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಫಲ ಟ್ರಸ್ಟ್ ನ  ಅಧ್ಯಕ್ಷರಾದ ಕೊಂಕೋಡಿ ಪದ್ಮನಾಭ ಭಟ್ ಮಾತನಾಡಿ ಪ್ರತಿಯೊಬ್ಬರು ಗೋವುಗಳನ್ನು ಸಾಕಲು ಮನಸ್ಸು ಮಾಡಬೇಕು, ಪ್ರತಿಯೊಂದು ಮನೆಯಲ್ಲಿ ಗೋವುಗಳನ್ನು ಸಾಕಬೇಕು. ಈಗಿನ ಕಾಲಘಟ್ಟದಲ್ಲಿ ಗೋವುಗಳನ್ನು ಸಾಕಲು ಜನರು ಹೆದರುತ್ತಾರೆ. ಗೋ ಸಾಕಾಣೆಯೂ ಲಾಭದಾಯಕ. ನಾವು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ಬೆಳೆಸುತ್ತಾ ಗೋಶಾಲೆಗಳನ್ನು ಕೂಡ ಬೆಳೆಸಬೇಕು ಎಂದು ಹೇಳಿದರು.

ಕೃಷಿಕರಾದ ಪ್ರಶಾಂತ್ ರೈ ಕೈಕಾರ್ ರವರು ಪ್ರಾಸ್ತಾವಿಕ ಮಾತನ್ನಾಡಿ ಗೋವುಗಳ ಮಹತ್ವ ಗೋ ಉತ್ತನ್ನ ತಯಾರಿಕಾ ಕಾರ್ಯಾಗಾರದ ಅವಶ್ಯಕತೆಗಳನ್ನು ಹೇಳಿದರು.
ಗೋವಿಹಾರ ಅಧ್ಯಕ್ಷರಾದ ಕೃಷ್ಣನಾರಾಯಣ ಮುಳಿಯ ಮಾತನಾಡಿ ಗೋವಿನಿಂದಾಗುವ ಪ್ರಯೋಜನಗಳು ಮತ್ತು ಮುಳಿಯ ಗೋವಿಹಾರದ ಬಗ್ಗೆ ವಿಶೇಷ ಮಾಹಿತಿ, ಹಾಗೂ ಕಾರ್ಯಾಗಾರದ ಉಪಯುಕ್ತತೆ ಬಗ್ಗೆ ವಿವರಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಉಮೇಶ್ ಕುಲಕರ್ಣಿ, ಡಾ. ಎಮ್ ಯದುಕುಮಾರ್, ಉದಯ್ ಶಂಕರ್, ಕೆ.ಟಿ ವೆಂಕಟೇಶ್, ಭಾಸ್ಕರ್ ರಾವ್ ಉಬರಡ್ಕ, ಜಯಗುರು ಆಚಾರ್ಯ ಹಿಂದಾರು ಭಾಗವಹಿಸಿದ್ದರು.
ಗೋವಿನಿಂದಾಗಿ ಮನುಷ್ಯರಿಗೆ ದಿನನಿತ್ಯ ಬಳಕೆಯಾಗುವ ದಂತಮಂಜನ್, ಸೋಪು, ದೂಪಬತ್ತಿ, ಹಣತೆ, ವಿಭೂತಿ, ಬೆರಣಿ, ಧೂಪ, ಸ್ವರ್ಗಸಾರ, ಗೋನಂದಾಜಲ, ಎರೆಹುಳ ಗೊಬ್ಬರ, ಗಣಪತಿ ವಿಗ್ರಹ, ಅಮೃತ್ ಮಲಂ ಅಲ್ಲದೆ ಇತರ ಸೌಂದರ್ಯವರ್ಧಕ ಸಾಮಾಗ್ರಿಗಳು, ಕೃಷಿ ಭೂಮಿಗೆ ಬೇಕಾಗುವ ಜೀವಾಮೃತ, ಕೀಟ ನಿಯಂತ್ರಕ, ಜೀವಾಮೃತ ಔಷಧಿಗಳನ್ನು ತಯಾರಿಸುವ ವಿಧಾನವನ್ನು ಈ ಶಿಬಿರದಲ್ಲಿ ಕಲಿಸಿಕೊಡಲಾಯಿತು.
ಕಾರ್ಯಕ್ರಮವನ್ನು ಶಿವಪ್ರಸಾದ್ ನಿರೂಪಿಸಿದರು. ಮುಳಿಯ ಗೋವಿಹಾರದ ಉಸ್ತುವಾರಿ ಸದಾಶಿವ ಸ್ವಾಗತಿಸಿದರು. ಮುಳಿಯ ಗೋವಿಹಾರ ಸದಸ್ಯೆ ಅಶ್ವಿನಿಕೃಷ್ಣ ಮುಳಿಯ ಪ್ರಾರ್ಥಿಸಿದರು. ಶಂಕರ್ ಧನ್ಯವಾದಗೈದರು. ಕೋಕೋ ಗುರು ಮಾಲಕ ಸಂತೋಷ್, ಗೊಲೆಕ್ಸ್ ಕೃಷ್ಣಮೋಹನ್, ದಿನೇಶ್ ಪ್ರಸನ್ನ ಕರಿಯಾಳ, ಇಶಾ ಸುಲೋಚನಾ ಮುಳಿಯ ಮುಂತಾದವರು ಭಾಗವಹಿಸಿದ್ದರು. ಗೋಫಲ ಟ್ರಸ್ಟ್ ನ ಜನರಲ್ ಮ್ಯಾನೇಜರ್ ಬಾಲಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

4 minutes ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

5 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

8 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

8 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

22 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

23 hours ago