Advertisement
ಸುದ್ದಿಗಳು

ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ | ವಿಶೇಷ ಅನುಬಂಧ ಕಾರ್ಯಕ್ರಮ

Share

ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಮುಳಿಯದ ವತಿಯಿಂದ ಅಪ್ಪಂದಿರ ದಿನಕ್ಕೆ ವಿಶೇಷ ಸ್ಥಾನವನ್ನು ನೀಡಿ ಆಚರಣೆಗೆ ತರಲಾಗಿದೆ. ಐದು ಶೋರೂಂ ನಲ್ಲಿ ಸೇರಿದ ಜನರನ್ನು ನೋಡಿದರೆ ಮಹತ್ವವಿದೆ ಎಂಬುದು ತಿಳಿಯುತ್ತದೆ ಎಂದು ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು.

ಶನಿವಾರ ಪುತ್ತೂರು ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಅಪ್ಪಂದಿರ ದಿನದ ಅಂಗವಾಗಿ ಚಿನ್ನದಂತ ಅಪ್ಪ ನನ್ನ ಅಪ್ಪ ವಿನೂತನ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಂದೆಯವರು ಸಂಸ್ಥೆ ನಡೆಸುವ ಸಮಯದಲ್ಲಿ 916 ಚಿನ್ನಾಭರಣ ಎಂಬ ವ್ಯವಸ್ಥೆ ಇಲ್ಲದಿದ್ದರೂ, ಅವರ ಕಾಲದಲ್ಲಿ ನೀಡಿದ ಚಿನ್ನಾಭರಣಗಳು ಅದೇ ಗುಣಮಟ್ಟದಲ್ಲಿತ್ತು. ಆ ಪ್ಯೂರಿಟಿಯನ್ನು ಅಂದು ಗ್ರಾಹಕರಿಗೆ ನೀಡಿದ ಕಾರಣದಿಂದ ಇಂದಿಗೂ ಮುಳಿಯದ ಹೆಸರು ಉತ್ತಮವಾಗಿ ಉಳಿದುಕೊಂಡಿದೆ. ಸಂಸ್ಥೆಯ ಬೆಳವಣಿಗೆಯಲ್ಲೂ ಇದು ಮಹತ್ವದ ಪಾತ್ರವನ್ನು ವಹಿಸಿದೆ ಎಂದು ತಿಳಿಸಿದರು.

ಚಿನ್ನದಂತ ಅಪ್ಪ ನನ್ನ ಅಪ್ಪ ವಿನೂತನ ಕಾರ್ಯಕ್ರಮವನ್ನು ಮುಳಿಯ ಸಂಸ್ಥೆಯ ಹಿರಿಯರಾದ ಶ್ಯಾಮ್ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಿಲ್ವರ್ ಉತ್ಸವದ ಅಂಗವಾಗಿ ವಿವಿಧ ವಿನ್ಯಾಸದ ಆಭರಣಗಳನ್ನು ಬಿಡುಗಡೆ ಮಾಡಲಾಯಿತು.

ಗ್ರಾಹಕರಾದ ರವಿ ಕುಮಾರ್ ಮಾತನಾಡಿ ಹಿರಿಯರ ಕಾಲದಿಂದಲೂ ಮುಳಿಯದ ಗ್ರಾಹಕರಾಗಿದ್ದು, ಚಿನ್ನ ಎಂದರೆ ಮುಳಿಯ ಎಂದು ಹೆಸರುವಾಸಿಯಾಗಿದೆ. ಮುಳಿಯ ಸಂಸ್ಥೆ ವ್ಯಾಪಾರಕ್ಕೆ ಮಾತ್ರ ಸೀಮಿತವಾಗಿರದೆ, ಗ್ರಾಹಕರ ಸಂತೃಪ್ತಿಗೂ ಹೆಚ್ಚಿನ ಮಹತ್ವ ನೀಡುತ್ತಿರುವುದು ಕಾರ್ಯಕ್ರಮಗಳ ಮೂಲಕ ತಿಳಿಯುತ್ತದೆ ಎಂದರು.

ವಿಶೇಷ ರೀತಿಯ ಅನುಭಂದ ಕಾರ್ಯಕ್ರಮ, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳ ಕಾರ್ಯಕ್ರಮ ನಡೆಯಿತು. ಸಂಗೀತ ಮನೋರಂಜನೆಯನ್ನು ಗ್ರಾಹಕರಿಗೆ ನೀಡಲಾಯಿತು. ಗ್ರಾಹಕ ಇಸ್ಮಾಯಿಲ್ ನೆಲ್ಯಾಡಿ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಂಸ್ಥೆಯ ನಿರ್ದೇಶಕಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಮಾರುಕಟ್ಟೆ ಮುಖ್ಯಸ್ಥ ಸಂಜೀವ, ಪ್ಲೋರ್ ಮ್ಯಾನೇಜರ್ ಆನಂದ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಪ್ಲೋರ್ ಮ್ಯಾನೇಜರ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಸೌರಭ ರಾವ್ ಸಹಕರಿಸಿದರು.

ಏಕಕಾಲದಲ್ಲಿ ಕಾರ್ಯಕ್ರಮ: ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಶೋರೋಂ ನಲ್ಲಿ ಏಕಕಾಲದಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ವಿನೂತನ ಕಾರ್ಯಕ್ರಮ ನಡೆಯಿತು. 200 ಕ್ಕೂ ಅಧಿಕ ತಂದೆ ಮಗ, ಅಪ್ಪ ಮಗಳು ಜೋಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನರಂಜನಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

4 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

5 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago