ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.
ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು.
ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ. ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬದ್ಧರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ಹೇಳಿದರು.
ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…