ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಸಂಸ್ಥೆ 3 ರಿಂದ 12 ವರ್ಷದ ಮಕ್ಕಳಿಗಾಗಿ ಸ್ವಾತಂತ್ರ್ಯ ಹೋರಾಟಗಾರರ ಕುರಿತ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಿದೆ.
ಸ್ಪರ್ಧೆಯು ಆಗಸ್ಟ್ 14ರಂದು ಬೆಳಗ್ಗೆ 10.30ರಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಝೂಮ್ ಆಪ್ ಮೂಲಕ ನಡೆಯುವ ಸ್ಫರ್ಧೆಯನ್ನು ಫೇಸ್ಬುಕ್ ಲೈವ್ ಮೂಲಕ ಪ್ರಸಾರ ಮಾಡಲಾಗುವುದು. ಸ್ಫರ್ಧಿಗಳು ತಮ್ಮ ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ, ಮುಳಿಯ ಜ್ಯುವೆಲ್ಸ್ ನ ಝೂಮ್ ಆಪ್ ಲಿಂಕ್ ಒತ್ತಿ ಭಾಗವಹಿಸಬಹುದು. ನೋಂದಾಯಿತ ಸ್ಫರ್ಧಿಗಳಿಗೆ ಝೂಮ್ ಆಪ್ ಐಡಿ ಮತ್ತು ಪಾಸ್ವರ್ಡ್ಗಳನ್ನು ನೀಡಲಾಗುವುದು. ಭಾಗವಹಿಸುವವರು ಆಗಸ್ಟ್ 12ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ವಿಜೇತ ಸ್ಫರ್ಧಿಗಳಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ಸ್ಫರ್ಧಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ. ನೋಂದಾವಣೆಗಾಗಿ : 9353030916, 8494915916 ಸಂಖ್ಯೆಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…