ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಸಂಸ್ಥೆ 3 ರಿಂದ 12 ವರ್ಷದ ಮಕ್ಕಳಿಗಾಗಿ ಸ್ವಾತಂತ್ರ್ಯ ಹೋರಾಟಗಾರರ ಕುರಿತ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಿದೆ.
ಸ್ಪರ್ಧೆಯು ಆಗಸ್ಟ್ 14ರಂದು ಬೆಳಗ್ಗೆ 10.30ರಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಝೂಮ್ ಆಪ್ ಮೂಲಕ ನಡೆಯುವ ಸ್ಫರ್ಧೆಯನ್ನು ಫೇಸ್ಬುಕ್ ಲೈವ್ ಮೂಲಕ ಪ್ರಸಾರ ಮಾಡಲಾಗುವುದು. ಸ್ಫರ್ಧಿಗಳು ತಮ್ಮ ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ, ಮುಳಿಯ ಜ್ಯುವೆಲ್ಸ್ ನ ಝೂಮ್ ಆಪ್ ಲಿಂಕ್ ಒತ್ತಿ ಭಾಗವಹಿಸಬಹುದು. ನೋಂದಾಯಿತ ಸ್ಫರ್ಧಿಗಳಿಗೆ ಝೂಮ್ ಆಪ್ ಐಡಿ ಮತ್ತು ಪಾಸ್ವರ್ಡ್ಗಳನ್ನು ನೀಡಲಾಗುವುದು. ಭಾಗವಹಿಸುವವರು ಆಗಸ್ಟ್ 12ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ವಿಜೇತ ಸ್ಫರ್ಧಿಗಳಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ಸ್ಫರ್ಧಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ. ನೋಂದಾವಣೆಗಾಗಿ : 9353030916, 8494915916 ಸಂಖ್ಯೆಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…