Advertisement
ಸುದ್ದಿಗಳು

ನವರಾತ್ರಿ ಸಂಭ್ರಮ | ಅ. 2 ರಂದು ಮುಳಿಯ ಜ್ಯುವೆಲ್ಸ್ ವತಿಯಿಂದ ಆನ್ಲೈನ್ ದೇವಿಸ್ತುತಿ ಗಾಯನ ಸ್ಪರ್ಧೆ |

Share

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯ ಸಹಯೋಗದಲ್ಲಿ ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ದೇವಿಸ್ತುತಿ ಗಾಯನ ಸ್ಪರ್ಧೆ ಅಕ್ಟೋಬರ್ 2ರಂದು ಭಾನುವಾರ ನಡೆಯಲಿದೆ.

ಸ್ಪರ್ಧೆಗಳು 6 ರಿಂದ 10ನೇ ತರಗತಿ ಹಾಗೂ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಎಂಬ ಎರಡು ವಿಭಾಗಗಳಲ್ಲಿ ನಡೆಯಲಿವೆ. ಸ್ಪರ್ಧೆಯನ್ನು Zoom ವೇದಿಕೆ ಮೂಲಕ ನಡೆಸಲಾಗುವುದು. ರಿಜಿಸ್ಟ್ರೇಶನ್ ಮಾಡಿಕೊಂಡ ಸ್ಪರ್ಧಾಳುಗಳಿಗೆ ಲಾಗಿನ್ ಆಗಲು ಐಡಿ ಮತ್ತು ಪಾಸ್ವರ್ಡ್ಗಳನ್ನು ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಸ್ಪರ್ಧೆಯ ಸಮಯಾವಕಾಶ 2+ 1 ನಿಮಿಷಗಳಾಗಿದ್ದು, ಸ್ಪರ್ಧಿಗಳು ಕರೋಕೆ ಬಳಸುವಂತಿಲ್ಲ. ಗೀತೆಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಬೇಕು. ಎಲ್ಲಾ ಸ್ಪರ್ಧಾರ್ಥಿಗಳು @puttursrimahalingeshwara ಫೇಸ್ಬುಕ್ ಪುಟವನ್ನು ಲೈಕ್ ಮಾಡಬೇಕು. ನುರಿತ ಸಂಗೀತ ತೀರ್ಪುಗಾರರು ಹಾಗೂ ಸಂಸ್ಥೆಯ ತೀರ್ಮಾನವೇ ಅಂತಿಮವಾಗಿರುತ್ತದೆ. ಸಂಪೂರ್ಣ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ನ ಫೇಸ್ಬುಕ್ ಲೈವ್ ಮೂಲಕ ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನೋಂದಾವಣೆ ಉಚಿತವಾಗಿದ್ದು, ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ: 9353030916 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

2 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

3 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

7 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

8 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago