Advertisement
ಸುದ್ದಿಗಳು

ನವರಾತ್ರಿ ಸಂಭ್ರಮ | ಅ. 2 ರಂದು ಮುಳಿಯ ಜ್ಯುವೆಲ್ಸ್ ವತಿಯಿಂದ ಆನ್ಲೈನ್ ದೇವಿಸ್ತುತಿ ಗಾಯನ ಸ್ಪರ್ಧೆ |

Share

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ರೇಡಿಯೋ ಪಾಂಚಜನ್ಯ ಸಹಯೋಗದಲ್ಲಿ ಮುಳಿಯ ಜ್ಯುವೆಲ್ಸ್ ನಿರ್ವಹಣೆ ಹಾಗೂ ಪ್ರಾಯೋಜಕತ್ವದಲ್ಲಿ ನವರಾತ್ರಿ ಪ್ರಯುಕ್ತ ದೇವಿಸ್ತುತಿ ಗಾಯನ ಸ್ಪರ್ಧೆ ಅಕ್ಟೋಬರ್ 2ರಂದು ಭಾನುವಾರ ನಡೆಯಲಿದೆ.

ಸ್ಪರ್ಧೆಗಳು 6 ರಿಂದ 10ನೇ ತರಗತಿ ಹಾಗೂ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಎಂಬ ಎರಡು ವಿಭಾಗಗಳಲ್ಲಿ ನಡೆಯಲಿವೆ. ಸ್ಪರ್ಧೆಯನ್ನು Zoom ವೇದಿಕೆ ಮೂಲಕ ನಡೆಸಲಾಗುವುದು. ರಿಜಿಸ್ಟ್ರೇಶನ್ ಮಾಡಿಕೊಂಡ ಸ್ಪರ್ಧಾಳುಗಳಿಗೆ ಲಾಗಿನ್ ಆಗಲು ಐಡಿ ಮತ್ತು ಪಾಸ್ವರ್ಡ್ಗಳನ್ನು ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಸ್ಪರ್ಧೆಯ ಸಮಯಾವಕಾಶ 2+ 1 ನಿಮಿಷಗಳಾಗಿದ್ದು, ಸ್ಪರ್ಧಿಗಳು ಕರೋಕೆ ಬಳಸುವಂತಿಲ್ಲ. ಗೀತೆಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಬೇಕು. ಎಲ್ಲಾ ಸ್ಪರ್ಧಾರ್ಥಿಗಳು @puttursrimahalingeshwara ಫೇಸ್ಬುಕ್ ಪುಟವನ್ನು ಲೈಕ್ ಮಾಡಬೇಕು. ನುರಿತ ಸಂಗೀತ ತೀರ್ಪುಗಾರರು ಹಾಗೂ ಸಂಸ್ಥೆಯ ತೀರ್ಮಾನವೇ ಅಂತಿಮವಾಗಿರುತ್ತದೆ. ಸಂಪೂರ್ಣ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ನ ಫೇಸ್ಬುಕ್ ಲೈವ್ ಮೂಲಕ ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನೋಂದಾವಣೆ ಉಚಿತವಾಗಿದ್ದು, ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ: 9353030916 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

37 minutes ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

45 minutes ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

59 minutes ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

16 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

17 hours ago