ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡತನವನ್ನು ವಿಶೇಷವಾಗಿ ನ.10 ರಂದು ಬೆಳಿಗ್ಗೆ 10:30 ರಿಂದ ಆಚರಿಸುತ್ತಿದೆ. ಈ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುತ್ತಿದೆ. ಕನ್ನಡ ಭಾವಗೀತಾಭಿನಯ ಹೆಗ್ಗಳಿಕೆಯ ಮಾನಸಿ ಸುಧೀರ್ ಇವರಿಂದ “ಕನ್ನಡ ಬದುಕು ಬಂಗಾರ” ಎಂಬ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ಆಯೋಜಿಸುತ್ತಿದೆ. ಇದರ ಮುಖಾಂತರ “ಬೆಳೆಸೋಣ ನಮ್ಮತನ” ಎಂಬ ಸಂದೇಶವನ್ನು ಸಂಸ್ಥೆಯು ಸಾರಲಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರಿನ ನಿಕಟಪೂರ್ವಾಧ್ಯಕ್ಷ ಆಗಿರುವ ಬಿ ಐತ್ತಪ್ಪ ನಾಯ್ಕ್ ಆಗಮಿಸಲಿದ್ದಾರೆ. ಈ ಕನ್ನಡತನದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ.
ಮುಳಿಯ ಚಿನ್ನೋತ್ಸವದ ಸಂದರ್ಭದಲ್ಲಿ ನಡೆಯುವ ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸಂಸ್ಥೆಯ ಚೇರ್ಮೇನ್ರವರಾದ ಮುಳಿಯ ಕೇಶವ ಪ್ರಸಾದ್ ಅವರು “ಕನ್ನಡತನದ ಸಾಂಸ್ಕೃತಿಕ ಪರಂಪರೆಯುಳ್ಳ ನಾಡಿನ ಹೆಮ್ಮೆಯ ಆಭರಣ ಉದ್ಯಮ ಸಂಸ್ಥೆಯಾದ ಮುಳಿಯ ಜ್ಯುವೆಲ್ಸ್ ಸಾಹಿತ್ಯ, ಸಂಸ್ಕøತಿಯನ್ನು ನಮ್ಮ ಮನೆತನದ ಬದುಕು-ಭಾವವಾಗಿದೆ. ಹೀಗಾಗಿ ಈ ಬಗೆಯ ಕಾರ್ಯಕ್ರಮ ಎಂದು ಹೇಳಿದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…