ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡತನವನ್ನು ವಿಶೇಷವಾಗಿ ನ.10 ರಂದು ಬೆಳಿಗ್ಗೆ 10:30 ರಿಂದ ಆಚರಿಸುತ್ತಿದೆ. ಈ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುತ್ತಿದೆ. ಕನ್ನಡ ಭಾವಗೀತಾಭಿನಯ ಹೆಗ್ಗಳಿಕೆಯ ಮಾನಸಿ ಸುಧೀರ್ ಇವರಿಂದ “ಕನ್ನಡ ಬದುಕು ಬಂಗಾರ” ಎಂಬ ವಿಶೇಷ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್ ಆಯೋಜಿಸುತ್ತಿದೆ. ಇದರ ಮುಖಾಂತರ “ಬೆಳೆಸೋಣ ನಮ್ಮತನ” ಎಂಬ ಸಂದೇಶವನ್ನು ಸಂಸ್ಥೆಯು ಸಾರಲಿದೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರಿನ ನಿಕಟಪೂರ್ವಾಧ್ಯಕ್ಷ ಆಗಿರುವ ಬಿ ಐತ್ತಪ್ಪ ನಾಯ್ಕ್ ಆಗಮಿಸಲಿದ್ದಾರೆ. ಈ ಕನ್ನಡತನದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ.
ಮುಳಿಯ ಚಿನ್ನೋತ್ಸವದ ಸಂದರ್ಭದಲ್ಲಿ ನಡೆಯುವ ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಸಂಸ್ಥೆಯ ಚೇರ್ಮೇನ್ರವರಾದ ಮುಳಿಯ ಕೇಶವ ಪ್ರಸಾದ್ ಅವರು “ಕನ್ನಡತನದ ಸಾಂಸ್ಕೃತಿಕ ಪರಂಪರೆಯುಳ್ಳ ನಾಡಿನ ಹೆಮ್ಮೆಯ ಆಭರಣ ಉದ್ಯಮ ಸಂಸ್ಥೆಯಾದ ಮುಳಿಯ ಜ್ಯುವೆಲ್ಸ್ ಸಾಹಿತ್ಯ, ಸಂಸ್ಕøತಿಯನ್ನು ನಮ್ಮ ಮನೆತನದ ಬದುಕು-ಭಾವವಾಗಿದೆ. ಹೀಗಾಗಿ ಈ ಬಗೆಯ ಕಾರ್ಯಕ್ರಮ ಎಂದು ಹೇಳಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…