ಭಾರತೀಯ ರಬ್ಬರ್‌ ಮಂಡಳಿ ಸದಸ್ಯರಾಗಿ ಮುಳಿಯ ಕೇಶವ ಭಟ್‌ ನಾಮನಿರ್ದೇಶನ |

September 21, 2022
11:53 AM

ಭಾರತೀಯ ರಬ್ಬರ್‌ ಮಂಡಳಿ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಮುಳಿಯ ಕೇಶವ ಭಟ್‌  ಭಾರತ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದಾರೆ. ರಾಜ್ಯದಿಂದ ಇಬ್ಬರು ಈ ಮಂಡಳಿಯಲ್ಲಿ ಇದ್ದಾರೆ. ಸಂಸದ ನಳಿನ್‌ ಕುಮಾರ್‌ ಕೂಡಾ ಈ ಮಂಡಳಿ ಸದಸ್ಯರಾಗಿದ್ದಾರೆ.

ಭಾರತೀಯ ರಬ್ಬರ್‌ ಮಂಡಳಿಯು ರಬ್ಬರ್‌ ಬೆಳೆಗಾರರ ಹಿತ ಹಾಗೂ ರಬ್ಬರ್‌ ಅಭಿವೃದ್ಧಿಯ ಬಗ್ಗೆ ಕೆಲಸ ಮಾಡುತ್ತಿದೆ. ದೇಶದ ಅತ್ಯಂತ ಪ್ರತಿಷ್ಠಿತ ಮಂಡಳಿಗಳಲ್ಲಿ ಒಂದಾಗಿರುವ ರಬ್ಬರ್‌ ಮಂಡಳಿಯು, ಅಂತರಾಷ್ಟ್ರೀಯ ರಬ್ಬರ್‌ ಮಾರುಕಟ್ಟೆ ಹಾಗೂ ರಬ್ಬರ್‌ ಸಂಸ್ಥೆಗಳು ಮತ್ತು ರಬ್ಬರ್‌ ಅಭಿವೃದ್ಧಿಯ ಕಡೆಗೆ ಗಮನಹರಿಸುತ್ತದೆ. ವಾಣಿಜ್ಯ ಇಲಾಖೆಯ ಅಡಿಯಲ್ಲಿ ಬರುವ ಈ ಮಂಡಳಿಯು ರಬ್ಬರ್‌ ಉದ್ಯಮಗಳಿಗೆ ರಬ್ಬರ್‌ ಪೂರೈಕೆ ಹಾಗೂ ರಬ್ಬರ್‌ ಬಳಕೆಯ ಕಡೆಗೂ ಆದ್ಯತೆ ನೀಡುತ್ತದೆ. ಈ ಸಂಸ್ಥೆಗೆ ರಬ್ಬರ್‌ ಬೆಳೆಗಾರರ ಪರವಾಗಿ ಮುಳಿಯ ಕೇಶವ ಭಟ್‌ ಅವರನ್ನು ಭಾರತ ಸರ್ಕಾರವು ಮುಂದಿನ ಮೂರು ವರ್ಷದ ಅವಧಿಗೆ ನಾಮನಿರ್ದೇಶನ ಮಾಡಿದೆ.‌ ಮುಳಿಯ ಕೇಶವ ಭಟ್‌ ಅವರು 10 ವರ್ಷಗಳಿಂದ ಗುತ್ತಿಗಾರು ರಬ್ಬರ್‌ ಸಹಕಾರಿ ಸಂಘದ ನಿರ್ದೇಶಕರಾಗಿ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು.

ಈ ಮಂಡಳಿಯಲ್ಲಿ 16 ಜನ ಸದಸ್ಯರು ಇದ್ದಾರೆ. ವಿವಿಧ ರಾಜ್ಯಗಳ ಐಎಎಸ್‌ ಅಧಿಕಾರಿಗಳು, ಸಂಸದ ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ಇತರ ರಾಜ್ಯದ ಸಂಸದರು ಹಾಗೂ ತೋಟಗಾರಿಕಾ ಕಮಿಶನರ್‌, ಸೇರಿದಂತೆ ವಿವಿಧ ರಾಜ್ಯಗಳ ಪ್ರಮುಖರು ಇದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror