ಮುಳಿಯ ಕೇಶವ ಭಟ್
ಭಾರತೀಯ ರಬ್ಬರ್ ಮಂಡಳಿ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಮುಳಿಯ ಕೇಶವ ಭಟ್ ಭಾರತ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದಾರೆ. ರಾಜ್ಯದಿಂದ ಇಬ್ಬರು ಈ ಮಂಡಳಿಯಲ್ಲಿ ಇದ್ದಾರೆ. ಸಂಸದ ನಳಿನ್ ಕುಮಾರ್ ಕೂಡಾ ಈ ಮಂಡಳಿ ಸದಸ್ಯರಾಗಿದ್ದಾರೆ.
ಭಾರತೀಯ ರಬ್ಬರ್ ಮಂಡಳಿಯು ರಬ್ಬರ್ ಬೆಳೆಗಾರರ ಹಿತ ಹಾಗೂ ರಬ್ಬರ್ ಅಭಿವೃದ್ಧಿಯ ಬಗ್ಗೆ ಕೆಲಸ ಮಾಡುತ್ತಿದೆ. ದೇಶದ ಅತ್ಯಂತ ಪ್ರತಿಷ್ಠಿತ ಮಂಡಳಿಗಳಲ್ಲಿ ಒಂದಾಗಿರುವ ರಬ್ಬರ್ ಮಂಡಳಿಯು, ಅಂತರಾಷ್ಟ್ರೀಯ ರಬ್ಬರ್ ಮಾರುಕಟ್ಟೆ ಹಾಗೂ ರಬ್ಬರ್ ಸಂಸ್ಥೆಗಳು ಮತ್ತು ರಬ್ಬರ್ ಅಭಿವೃದ್ಧಿಯ ಕಡೆಗೆ ಗಮನಹರಿಸುತ್ತದೆ. ವಾಣಿಜ್ಯ ಇಲಾಖೆಯ ಅಡಿಯಲ್ಲಿ ಬರುವ ಈ ಮಂಡಳಿಯು ರಬ್ಬರ್ ಉದ್ಯಮಗಳಿಗೆ ರಬ್ಬರ್ ಪೂರೈಕೆ ಹಾಗೂ ರಬ್ಬರ್ ಬಳಕೆಯ ಕಡೆಗೂ ಆದ್ಯತೆ ನೀಡುತ್ತದೆ. ಈ ಸಂಸ್ಥೆಗೆ ರಬ್ಬರ್ ಬೆಳೆಗಾರರ ಪರವಾಗಿ ಮುಳಿಯ ಕೇಶವ ಭಟ್ ಅವರನ್ನು ಭಾರತ ಸರ್ಕಾರವು ಮುಂದಿನ ಮೂರು ವರ್ಷದ ಅವಧಿಗೆ ನಾಮನಿರ್ದೇಶನ ಮಾಡಿದೆ. ಮುಳಿಯ ಕೇಶವ ಭಟ್ ಅವರು 10 ವರ್ಷಗಳಿಂದ ಗುತ್ತಿಗಾರು ರಬ್ಬರ್ ಸಹಕಾರಿ ಸಂಘದ ನಿರ್ದೇಶಕರಾಗಿ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು.
ಈ ಮಂಡಳಿಯಲ್ಲಿ 16 ಜನ ಸದಸ್ಯರು ಇದ್ದಾರೆ. ವಿವಿಧ ರಾಜ್ಯಗಳ ಐಎಎಸ್ ಅಧಿಕಾರಿಗಳು, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಇತರ ರಾಜ್ಯದ ಸಂಸದರು ಹಾಗೂ ತೋಟಗಾರಿಕಾ ಕಮಿಶನರ್, ಸೇರಿದಂತೆ ವಿವಿಧ ರಾಜ್ಯಗಳ ಪ್ರಮುಖರು ಇದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…