ಮುಳಿಯ ಕೇಶವ ಭಟ್
ಭಾರತೀಯ ರಬ್ಬರ್ ಮಂಡಳಿ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಮುಳಿಯ ಕೇಶವ ಭಟ್ ಭಾರತ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದಾರೆ. ರಾಜ್ಯದಿಂದ ಇಬ್ಬರು ಈ ಮಂಡಳಿಯಲ್ಲಿ ಇದ್ದಾರೆ. ಸಂಸದ ನಳಿನ್ ಕುಮಾರ್ ಕೂಡಾ ಈ ಮಂಡಳಿ ಸದಸ್ಯರಾಗಿದ್ದಾರೆ.
ಭಾರತೀಯ ರಬ್ಬರ್ ಮಂಡಳಿಯು ರಬ್ಬರ್ ಬೆಳೆಗಾರರ ಹಿತ ಹಾಗೂ ರಬ್ಬರ್ ಅಭಿವೃದ್ಧಿಯ ಬಗ್ಗೆ ಕೆಲಸ ಮಾಡುತ್ತಿದೆ. ದೇಶದ ಅತ್ಯಂತ ಪ್ರತಿಷ್ಠಿತ ಮಂಡಳಿಗಳಲ್ಲಿ ಒಂದಾಗಿರುವ ರಬ್ಬರ್ ಮಂಡಳಿಯು, ಅಂತರಾಷ್ಟ್ರೀಯ ರಬ್ಬರ್ ಮಾರುಕಟ್ಟೆ ಹಾಗೂ ರಬ್ಬರ್ ಸಂಸ್ಥೆಗಳು ಮತ್ತು ರಬ್ಬರ್ ಅಭಿವೃದ್ಧಿಯ ಕಡೆಗೆ ಗಮನಹರಿಸುತ್ತದೆ. ವಾಣಿಜ್ಯ ಇಲಾಖೆಯ ಅಡಿಯಲ್ಲಿ ಬರುವ ಈ ಮಂಡಳಿಯು ರಬ್ಬರ್ ಉದ್ಯಮಗಳಿಗೆ ರಬ್ಬರ್ ಪೂರೈಕೆ ಹಾಗೂ ರಬ್ಬರ್ ಬಳಕೆಯ ಕಡೆಗೂ ಆದ್ಯತೆ ನೀಡುತ್ತದೆ. ಈ ಸಂಸ್ಥೆಗೆ ರಬ್ಬರ್ ಬೆಳೆಗಾರರ ಪರವಾಗಿ ಮುಳಿಯ ಕೇಶವ ಭಟ್ ಅವರನ್ನು ಭಾರತ ಸರ್ಕಾರವು ಮುಂದಿನ ಮೂರು ವರ್ಷದ ಅವಧಿಗೆ ನಾಮನಿರ್ದೇಶನ ಮಾಡಿದೆ. ಮುಳಿಯ ಕೇಶವ ಭಟ್ ಅವರು 10 ವರ್ಷಗಳಿಂದ ಗುತ್ತಿಗಾರು ರಬ್ಬರ್ ಸಹಕಾರಿ ಸಂಘದ ನಿರ್ದೇಶಕರಾಗಿ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು.
ಈ ಮಂಡಳಿಯಲ್ಲಿ 16 ಜನ ಸದಸ್ಯರು ಇದ್ದಾರೆ. ವಿವಿಧ ರಾಜ್ಯಗಳ ಐಎಎಸ್ ಅಧಿಕಾರಿಗಳು, ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಇತರ ರಾಜ್ಯದ ಸಂಸದರು ಹಾಗೂ ತೋಟಗಾರಿಕಾ ಕಮಿಶನರ್, ಸೇರಿದಂತೆ ವಿವಿಧ ರಾಜ್ಯಗಳ ಪ್ರಮುಖರು ಇದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…