ಕನ್ನಡ ಚಿತ್ತಾರ | ಮುಳಿಯ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗೆ ಕನ್ನಡ ಚಿತ್ತಾರ ಎಂಬ ವಿಶಿಷ್ಟ ಸ್ಪರ್ಧೆ

November 11, 2022
2:16 PM
ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಕನ್ನಡತನ ನಮ್ಮೆಲ್ಲರ ಮನದಲ್ಲೂ ಬೇರೂರಬೇಕು. ಮುಖ್ಯವಾಗಿ ಮಕ್ಕಳಲ್ಲಿ ಕನ್ನಡದ ಮೇಲಿನ ಪ್ರೀತಿ, ಅಭಿಮಾನ, ಗೌರವವನ್ನು ಹೆಚ್ಚಿಸಿದರೆ, ಮುಂದೆ ಅವರೊಂದಿಗೆ ಕನ್ನಡವೂ ಬೆಳೆಯುತ್ತದೆ. ಕನ್ನಡದ ಕಂಪು ಪಸರಿಸುತ್ತದೆ.
ಈ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮುಳಿಯ ಪ್ರತಿಷ್ಠಾನವು ಮಕ್ಕಳಲ್ಲಿ ಕನ್ನಡ ಪ್ರಜ್ಞೆಯ ಜಾಗೃತಿ ಮೂಡಿಸಲು ವಿಶಿಷ್ಟವಾದ “ಕನ್ನಡ ಚಿತ್ತಾರ” ಕನ್ನಡ ನಾಡು, ನುಡಿ, ಭಾವ – ಬದುಕು ಬಿಂಬಿಸುವ ಚಿತ್ರ ರಚನಾ ಸ್ಪರ್ಧೆಯನ್ನು ಆಯೋಜಿಸಿದೆ. ನವೆಂಬರ್ 13 ಭಾನುವಾರದಂದು ಪುತ್ತೂರಿನ ಕೋರ್ಟ್ ರಸ್ತೆಯ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಬೆಳಗ್ಗೆ 9:30ಕ್ಕೆ ಸರಿಯಾಗಿ ಈ ಸ್ಪರ್ಧೆ ಆರಂಭವಾಗಲಿದೆ. 3ನೇ ತರಗತಿಯಿಂದ 5ನೇ ತರಗತಿ ಹಾಗೂ 6ನೇ ತರಗತಿಯಿಂದ 8ನೇ ತರಗತಿಯ ಎರಡು ವಿಭಾಗಗಳಲ್ಲಿ ಈ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.
ಸ್ಫರ್ಧೆಯ ನಿಬಂಧನೆಗಳು.....
 • ಸ್ಪರ್ಧೆಗೆ ಮೊದಲು ಮಗುವಿನ ಏವರ ನೋಂದಣಿ ಕಡ್ಡಾಯ
• ಮಕ್ಕಳು ಕಡ್ಡಾಯವಾಗಿ ಪೋಷಕರೊಂದಿಗೆ, ಶಾಲಾ ಗುರುತಿನ ಚೀಟಿ ಸಹಿತ ಹಾಜರಾಗಬೇಕು.
• ಕನ್ನಡತನ, ನಾಡಿನ ಇತಿಹಾಸ ಸಂಬಂಧಿಸಿದ ವಿಷಯ ಆಧರಿತ ಚಿತ್ರ ರಚಿಸಬೇಕು.
• ಸ್ವಂತ ಆಲೋಚನೆ, ಸೃಜನಶೀಲತೆಯಿಂದ ಕೂಡಿರಬೇಕು. ಅನುಕರಣೆ ಇರಬಾರದು.
• ಚಿತ್ರ ರಚನೆಗೆ ಕಾಗದಗಳನ್ನು ಸ್ಥಳದಲ್ಲೇ ಒದಗಿಸಲಾಗುವುದು. ಉಳಿದ ಅಗತ್ಯ ಪರಿಕರಗಳನ್ನು ಮಕ್ಕಳೇ ತರಬೇಕು.
• ಪ್ರತಿ ಸ್ಪರ್ಧೆಯ ಅವಧಿ 1 ಗಂಟೆ.
• ನವೆಂಬರ್ 12 ರ ಒಳಗೆ ನೋಂದಾವಣೆ ಮಾಡತಕ್ಕದ್ದು
ಮುಳಿಯ ಜ್ಯುವೆಲ್ಸ್ ಪುತ್ತೂರು ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ, ವಿಜೇತರಾದವರಿಗೆ ಆಕರ್ಷಕ ಬಹುಮಾನವನ್ನು ವಿತರಿಸಲಾಗುವುದು. ಪ್ರಥಮ ಸ್ಥಾನ ಪಡೆಯುವ ಸ್ಪರ್ಧಿಗೆ ಚಿನ್ನದ ನಾಣ್ಯ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಸ್ಪರ್ಧಿಗೆ ಬೆಳ್ಳಿ ನಾಣ್ಯವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಜೊತೆಗೆ ಎರಡು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಎರಡು ಆಕರ್ಷಕ ಬಹುಮಾನ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುವುದು. ಸ್ಪರ್ಧೆಯ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಲು 8494938916 ಸಂಖ್ಯೆಯನ್ನು ಸಂಪರ್ಕಿಸಬಹುದು.
ಕನ್ನಡದ ಘಮವನ್ನು ಕಲೆಯ ಮೂಲಕ ಎಲ್ಲೆಡೆಯೂ ಹಬ್ಬಿಸಲು, ಕನ್ನಡ ಉತ್ಸವಕ್ಕೆ ಬಣ್ಣಗಳನ್ನು ತುಂಬಿ ರಂಗನ್ನು ಹೆಚ್ಚು ಮಾಡಲು ಈ ಸ್ಪರ್ಧೆಯಲ್ಲಿ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ 11,000 ಕಿ.ಮೀ ಕರಾವಳಿ ಅಪಾಯದ ಅಂಚಿನಲ್ಲಿ – ಮುಂದಿನ 15 ವರ್ಷ ಕರಾವಳಿ ಕರ್ನಾಟಕಕ್ಕೆ ನಿರ್ಣಾಯಕ | ಹೊಸ ಹವಾಮಾನ ವರದಿ ಎಚ್ಚರಿಕೆ
May 31, 2026
7:16 AM
by: ದ ರೂರಲ್ ಮಿರರ್.ಕಾಂ
‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?
May 31, 2026
6:55 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ
May 31, 2026
6:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror