Advertisement
ಜಿಲ್ಲೆ

ಕನ್ನಡ ಚಿತ್ತಾರ | ಮುಳಿಯ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗೆ ಕನ್ನಡ ಚಿತ್ತಾರ ಎಂಬ ವಿಶಿಷ್ಟ ಸ್ಪರ್ಧೆ

Share
ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಕನ್ನಡತನ ನಮ್ಮೆಲ್ಲರ ಮನದಲ್ಲೂ ಬೇರೂರಬೇಕು. ಮುಖ್ಯವಾಗಿ ಮಕ್ಕಳಲ್ಲಿ ಕನ್ನಡದ ಮೇಲಿನ ಪ್ರೀತಿ, ಅಭಿಮಾನ, ಗೌರವವನ್ನು ಹೆಚ್ಚಿಸಿದರೆ, ಮುಂದೆ ಅವರೊಂದಿಗೆ ಕನ್ನಡವೂ ಬೆಳೆಯುತ್ತದೆ. ಕನ್ನಡದ ಕಂಪು ಪಸರಿಸುತ್ತದೆ.
ಈ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮುಳಿಯ ಪ್ರತಿಷ್ಠಾನವು ಮಕ್ಕಳಲ್ಲಿ ಕನ್ನಡ ಪ್ರಜ್ಞೆಯ ಜಾಗೃತಿ ಮೂಡಿಸಲು ವಿಶಿಷ್ಟವಾದ “ಕನ್ನಡ ಚಿತ್ತಾರ” ಕನ್ನಡ ನಾಡು, ನುಡಿ, ಭಾವ – ಬದುಕು ಬಿಂಬಿಸುವ ಚಿತ್ರ ರಚನಾ ಸ್ಪರ್ಧೆಯನ್ನು ಆಯೋಜಿಸಿದೆ. ನವೆಂಬರ್ 13 ಭಾನುವಾರದಂದು ಪುತ್ತೂರಿನ ಕೋರ್ಟ್ ರಸ್ತೆಯ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಬೆಳಗ್ಗೆ 9:30ಕ್ಕೆ ಸರಿಯಾಗಿ ಈ ಸ್ಪರ್ಧೆ ಆರಂಭವಾಗಲಿದೆ. 3ನೇ ತರಗತಿಯಿಂದ 5ನೇ ತರಗತಿ ಹಾಗೂ 6ನೇ ತರಗತಿಯಿಂದ 8ನೇ ತರಗತಿಯ ಎರಡು ವಿಭಾಗಗಳಲ್ಲಿ ಈ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.
ಸ್ಫರ್ಧೆಯ ನಿಬಂಧನೆಗಳು.....
• ಸ್ಪರ್ಧೆಗೆ ಮೊದಲು ಮಗುವಿನ ಏವರ ನೋಂದಣಿ ಕಡ್ಡಾಯ
• ಮಕ್ಕಳು ಕಡ್ಡಾಯವಾಗಿ ಪೋಷಕರೊಂದಿಗೆ, ಶಾಲಾ ಗುರುತಿನ ಚೀಟಿ ಸಹಿತ ಹಾಜರಾಗಬೇಕು.
• ಕನ್ನಡತನ, ನಾಡಿನ ಇತಿಹಾಸ ಸಂಬಂಧಿಸಿದ ವಿಷಯ ಆಧರಿತ ಚಿತ್ರ ರಚಿಸಬೇಕು.
• ಸ್ವಂತ ಆಲೋಚನೆ, ಸೃಜನಶೀಲತೆಯಿಂದ ಕೂಡಿರಬೇಕು. ಅನುಕರಣೆ ಇರಬಾರದು.
• ಚಿತ್ರ ರಚನೆಗೆ ಕಾಗದಗಳನ್ನು ಸ್ಥಳದಲ್ಲೇ ಒದಗಿಸಲಾಗುವುದು. ಉಳಿದ ಅಗತ್ಯ ಪರಿಕರಗಳನ್ನು ಮಕ್ಕಳೇ ತರಬೇಕು.
• ಪ್ರತಿ ಸ್ಪರ್ಧೆಯ ಅವಧಿ 1 ಗಂಟೆ.
• ನವೆಂಬರ್ 12 ರ ಒಳಗೆ ನೋಂದಾವಣೆ ಮಾಡತಕ್ಕದ್ದು
ಮುಳಿಯ ಜ್ಯುವೆಲ್ಸ್ ಪುತ್ತೂರು ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ, ವಿಜೇತರಾದವರಿಗೆ ಆಕರ್ಷಕ ಬಹುಮಾನವನ್ನು ವಿತರಿಸಲಾಗುವುದು. ಪ್ರಥಮ ಸ್ಥಾನ ಪಡೆಯುವ ಸ್ಪರ್ಧಿಗೆ ಚಿನ್ನದ ನಾಣ್ಯ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಸ್ಪರ್ಧಿಗೆ ಬೆಳ್ಳಿ ನಾಣ್ಯವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಜೊತೆಗೆ ಎರಡು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಎರಡು ಆಕರ್ಷಕ ಬಹುಮಾನ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುವುದು. ಸ್ಪರ್ಧೆಯ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಲು 8494938916 ಸಂಖ್ಯೆಯನ್ನು ಸಂಪರ್ಕಿಸಬಹುದು.
ಕನ್ನಡದ ಘಮವನ್ನು ಕಲೆಯ ಮೂಲಕ ಎಲ್ಲೆಡೆಯೂ ಹಬ್ಬಿಸಲು, ಕನ್ನಡ ಉತ್ಸವಕ್ಕೆ ಬಣ್ಣಗಳನ್ನು ತುಂಬಿ ರಂಗನ್ನು ಹೆಚ್ಚು ಮಾಡಲು ಈ ಸ್ಪರ್ಧೆಯಲ್ಲಿ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

18 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

21 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

21 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago