Advertisement
ಜಿಲ್ಲೆ

ಕನ್ನಡ ಚಿತ್ತಾರ | ಮುಳಿಯ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗೆ ಕನ್ನಡ ಚಿತ್ತಾರ ಎಂಬ ವಿಶಿಷ್ಟ ಸ್ಪರ್ಧೆ

Share
ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಕನ್ನಡತನ ನಮ್ಮೆಲ್ಲರ ಮನದಲ್ಲೂ ಬೇರೂರಬೇಕು. ಮುಖ್ಯವಾಗಿ ಮಕ್ಕಳಲ್ಲಿ ಕನ್ನಡದ ಮೇಲಿನ ಪ್ರೀತಿ, ಅಭಿಮಾನ, ಗೌರವವನ್ನು ಹೆಚ್ಚಿಸಿದರೆ, ಮುಂದೆ ಅವರೊಂದಿಗೆ ಕನ್ನಡವೂ ಬೆಳೆಯುತ್ತದೆ. ಕನ್ನಡದ ಕಂಪು ಪಸರಿಸುತ್ತದೆ.
ಈ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮುಳಿಯ ಪ್ರತಿಷ್ಠಾನವು ಮಕ್ಕಳಲ್ಲಿ ಕನ್ನಡ ಪ್ರಜ್ಞೆಯ ಜಾಗೃತಿ ಮೂಡಿಸಲು ವಿಶಿಷ್ಟವಾದ “ಕನ್ನಡ ಚಿತ್ತಾರ” ಕನ್ನಡ ನಾಡು, ನುಡಿ, ಭಾವ – ಬದುಕು ಬಿಂಬಿಸುವ ಚಿತ್ರ ರಚನಾ ಸ್ಪರ್ಧೆಯನ್ನು ಆಯೋಜಿಸಿದೆ. ನವೆಂಬರ್ 13 ಭಾನುವಾರದಂದು ಪುತ್ತೂರಿನ ಕೋರ್ಟ್ ರಸ್ತೆಯ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಬೆಳಗ್ಗೆ 9:30ಕ್ಕೆ ಸರಿಯಾಗಿ ಈ ಸ್ಪರ್ಧೆ ಆರಂಭವಾಗಲಿದೆ. 3ನೇ ತರಗತಿಯಿಂದ 5ನೇ ತರಗತಿ ಹಾಗೂ 6ನೇ ತರಗತಿಯಿಂದ 8ನೇ ತರಗತಿಯ ಎರಡು ವಿಭಾಗಗಳಲ್ಲಿ ಈ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.
ಸ್ಫರ್ಧೆಯ ನಿಬಂಧನೆಗಳು.....
• ಸ್ಪರ್ಧೆಗೆ ಮೊದಲು ಮಗುವಿನ ಏವರ ನೋಂದಣಿ ಕಡ್ಡಾಯ
• ಮಕ್ಕಳು ಕಡ್ಡಾಯವಾಗಿ ಪೋಷಕರೊಂದಿಗೆ, ಶಾಲಾ ಗುರುತಿನ ಚೀಟಿ ಸಹಿತ ಹಾಜರಾಗಬೇಕು.
• ಕನ್ನಡತನ, ನಾಡಿನ ಇತಿಹಾಸ ಸಂಬಂಧಿಸಿದ ವಿಷಯ ಆಧರಿತ ಚಿತ್ರ ರಚಿಸಬೇಕು.
• ಸ್ವಂತ ಆಲೋಚನೆ, ಸೃಜನಶೀಲತೆಯಿಂದ ಕೂಡಿರಬೇಕು. ಅನುಕರಣೆ ಇರಬಾರದು.
• ಚಿತ್ರ ರಚನೆಗೆ ಕಾಗದಗಳನ್ನು ಸ್ಥಳದಲ್ಲೇ ಒದಗಿಸಲಾಗುವುದು. ಉಳಿದ ಅಗತ್ಯ ಪರಿಕರಗಳನ್ನು ಮಕ್ಕಳೇ ತರಬೇಕು.
• ಪ್ರತಿ ಸ್ಪರ್ಧೆಯ ಅವಧಿ 1 ಗಂಟೆ.
• ನವೆಂಬರ್ 12 ರ ಒಳಗೆ ನೋಂದಾವಣೆ ಮಾಡತಕ್ಕದ್ದು
ಮುಳಿಯ ಜ್ಯುವೆಲ್ಸ್ ಪುತ್ತೂರು ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ, ವಿಜೇತರಾದವರಿಗೆ ಆಕರ್ಷಕ ಬಹುಮಾನವನ್ನು ವಿತರಿಸಲಾಗುವುದು. ಪ್ರಥಮ ಸ್ಥಾನ ಪಡೆಯುವ ಸ್ಪರ್ಧಿಗೆ ಚಿನ್ನದ ನಾಣ್ಯ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಸ್ಪರ್ಧಿಗೆ ಬೆಳ್ಳಿ ನಾಣ್ಯವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಜೊತೆಗೆ ಎರಡು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಎರಡು ಆಕರ್ಷಕ ಬಹುಮಾನ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುವುದು. ಸ್ಪರ್ಧೆಯ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಲು 8494938916 ಸಂಖ್ಯೆಯನ್ನು ಸಂಪರ್ಕಿಸಬಹುದು.
ಕನ್ನಡದ ಘಮವನ್ನು ಕಲೆಯ ಮೂಲಕ ಎಲ್ಲೆಡೆಯೂ ಹಬ್ಬಿಸಲು, ಕನ್ನಡ ಉತ್ಸವಕ್ಕೆ ಬಣ್ಣಗಳನ್ನು ತುಂಬಿ ರಂಗನ್ನು ಹೆಚ್ಚು ಮಾಡಲು ಈ ಸ್ಪರ್ಧೆಯಲ್ಲಿ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

5 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

11 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

23 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

24 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago