ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

March 17, 2026
9:35 PM
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು. ಏಕಬಳಕೆಯ ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಪ್ರಕೃತಿ ಕಾಪಾಡುವಂತೆ ಮನವಿ ಮಾಡಲಾಯಿತು.

ಚಿಕ್ಕಮಗಳೂರು ಪ್ರವಾಸೋಧ್ಯಮ ಇಲಾಖೆ, ಜಿಲ್ಲಾಡಳಿತ, ಸೀತಾಳಮಲ್ಲಿಕಾರ್ಜುನ ಸೇವಾ ಸಮಿತಿ, ಲಯನ್ಸ್ ಕ್ಲಬ್ ಸೇರಿದಂತೆ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿಯಲ್ಲಿ  ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯದಲ್ಲಿ ನೂರಕ್ಕೂ ಹೆಚ್ಚು ಸ್ವಯಂಸೇವಕರು, ಪ್ರವಾಸಿ ಮಿತ್ರ ಸಿಬ್ಬಂದಿ ಹಾಗೂ ಸ್ಥಳೀಯರು ಭಾಗವಹಿಸಿ ಗಿರಿಪ್ರದೇಶಗಳಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯವನ್ನು ತೆರವುಗೊಳಿಸಿದರು.

ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಲೋಹಿತ್ ಎಂ.ಆರ್ ಮಾತನಾಡಿ, ಗಿರಿಪ್ರದೇಶಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧಿಸಲಾಗಿದ್ದು, ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಇತರೆ ತ್ಯಾಜ್ಯವನ್ನು ಕಡ್ಡಾಯವಾಗಿ ಕಸದ ತೊಟ್ಟಿಯಲ್ಲೇ ಹಾಕಬೇಕು ಎಂದು ತಿಳಿಸಿದರು.

ಸೀತಾಳಮಲ್ಲಿಕಾರ್ಜುನ ಸ್ವಾಮಿ ಟ್ರಸ್ಟ್ ಸದಸ್ಯ ವಿಜಯ್ ಕುಮಾರ್ ಅವರು, ಧಾರ್ಮಿಕ ಸ್ಥಳಗಳಿಗೆ ಬರುವ ಪ್ರವಾಸಿಗರು ಜವಾಬ್ದಾರಿಯಿಂದ ನಡೆದುಕೊಂಡು ಸ್ವಚ್ಛತೆ ಕಾಪಾಡಬೇಕು ಎಂದು ಮನವಿ ಮಾಡಿದರು.

ಸ್ವಯಂಸೇವಕಿ ಪುಷ್ಪಲತಾ ಮಾತನಾಡಿ, ಚಾರಣಕ್ಕೆ ಬರುವವರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುತ್ತಿರುವುದರಿಂದ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

A cleanliness drive was conducted at Mullayanagiri and Sitalayyanagiri hills in Chikkamagaluru with the participation of government departments and volunteers. Tourists were urged to avoid single-use plastics and maintain the natural beauty of the region.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ
March 17, 2026
10:47 PM
by: ದ ರೂರಲ್ ಮಿರರ್.ಕಾಂ
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್
March 17, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!
March 17, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್
March 17, 2026
2:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror