ಚಿಕ್ಕಮಗಳೂರು ಪ್ರವಾಸೋಧ್ಯಮ ಇಲಾಖೆ, ಜಿಲ್ಲಾಡಳಿತ, ಸೀತಾಳಮಲ್ಲಿಕಾರ್ಜುನ ಸೇವಾ ಸಮಿತಿ, ಲಯನ್ಸ್ ಕ್ಲಬ್ ಸೇರಿದಂತೆ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿಯಲ್ಲಿ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯದಲ್ಲಿ ನೂರಕ್ಕೂ ಹೆಚ್ಚು ಸ್ವಯಂಸೇವಕರು, ಪ್ರವಾಸಿ ಮಿತ್ರ ಸಿಬ್ಬಂದಿ ಹಾಗೂ ಸ್ಥಳೀಯರು ಭಾಗವಹಿಸಿ ಗಿರಿಪ್ರದೇಶಗಳಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯವನ್ನು ತೆರವುಗೊಳಿಸಿದರು.
ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಲೋಹಿತ್ ಎಂ.ಆರ್ ಮಾತನಾಡಿ, ಗಿರಿಪ್ರದೇಶಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧಿಸಲಾಗಿದ್ದು, ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಇತರೆ ತ್ಯಾಜ್ಯವನ್ನು ಕಡ್ಡಾಯವಾಗಿ ಕಸದ ತೊಟ್ಟಿಯಲ್ಲೇ ಹಾಕಬೇಕು ಎಂದು ತಿಳಿಸಿದರು.
ಸೀತಾಳಮಲ್ಲಿಕಾರ್ಜುನ ಸ್ವಾಮಿ ಟ್ರಸ್ಟ್ ಸದಸ್ಯ ವಿಜಯ್ ಕುಮಾರ್ ಅವರು, ಧಾರ್ಮಿಕ ಸ್ಥಳಗಳಿಗೆ ಬರುವ ಪ್ರವಾಸಿಗರು ಜವಾಬ್ದಾರಿಯಿಂದ ನಡೆದುಕೊಂಡು ಸ್ವಚ್ಛತೆ ಕಾಪಾಡಬೇಕು ಎಂದು ಮನವಿ ಮಾಡಿದರು.
ಸ್ವಯಂಸೇವಕಿ ಪುಷ್ಪಲತಾ ಮಾತನಾಡಿ, ಚಾರಣಕ್ಕೆ ಬರುವವರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುತ್ತಿರುವುದರಿಂದ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
A cleanliness drive was conducted at Mullayanagiri and Sitalayyanagiri hills in Chikkamagaluru with the participation of government departments and volunteers. Tourists were urged to avoid single-use plastics and maintain the natural beauty of the region.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…