ಮುಂಬಯಿಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಮೊದಲ ಮಳೆಗೆ ಮುಂಬಯಿಯ ಹಲವು ಪ್ರದೇಶಗಳು ಮುಳುಗಿದೆ. ಕೆಲವೇ ಗಂಟೆಗಳಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬಯಿ ಜೊತೆಗೆ ಪುಣೆ, ನಾಗ್ಪುರದಲ್ಲೂ ಭಾರಿ ಮಳೆಯಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಕೆಲವು ಕಡೆಗಳಲ್ಲಿ 220 ಮಿಮೀ ಮಳೆಯಾದ ಬಗ್ಗೆ ವರದಿಯಾಗಿದೆ.ಮಳೆಯ ಅಬ್ಬರ ಮುಂದುವರಿದಿದೆ.
ಮುಂಬಯಿ, ಥಾಣೆ, ಪಾಲ್ಘರ್ ಮತ್ತು ರಾಯಗಢದಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿತ್ತು. ಈ ನಡುವೆಯೇ ಭಾರಿ ಮಳೆ ಸುರಿದಿದೆ. ಇನ್ನೀಗ ಆರೆಂಜ್ ಎಲರ್ಟ್ ತಿಳಿಸಲಾಗಿದೆ. ಮೊದಲ ದಿನದ ಮಳೆಗೆ ಮುಂಬಯಿಯ ಹಲವಾರು ಭಾಗಗಳು ಜಲಾವೃತಗೊಂಡವು . ಮಳೆಯ ಅವಘಡ ಹಾಗೂ ಸಮಸ್ಯೆಗಳ ಬಗ್ಗೆ ಟ್ವಿಟ್ಟರ್ ಮೂಲಕ ಹಲವಾರು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮಳೆಯ ಕಾರಣದಿಂದ ಮುಂಬಯಿಯ ವಿಲೆ ಪಾರ್ಲೆಯ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಐದು ಮಂದಿಗೆ ಗಾಯಗಳು ವರದಿಯಾಗಿವೆ. ಶನಿವಾರ ಸುರಿದ ಭಾರೀ ಮಳೆಯ ನಡುವೆ, ಶನಿವಾರ ಸಂಜೆ ಗೋವಂಡಿಯ ಶಿವಾಜಿ ನಗರದಲ್ಲಿ ತುಂಬಿ ಹರಿಯುವ ಚರಂಡಿಯ ಮ್ಯಾನ್ಹೋಲ್ಗೆ ಬಿದ್ದು ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ನಗರದ ಹೆಚ್ಚಿನ ಭಾಗಗಳಲ್ಲಿ ಸುರಿದ ಭಾರೀ ಮಳೆಯ ಕಾರಣದಿಂದ ನಗರದ ಕಾಲುವೆಗಳು ತುಂಬಿ ಹರಿಯುತ್ತಿವೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…