ಮುರುಡೇಶ್ವರ | ಪ್ರವಾಸಿಗನನ್ನು ರಕ್ಷಣೆ ಮಾಡಿದ ಬೀಚ್ ಲೈಫ್ ಗಾರ್ಡ್

December 30, 2022
8:41 PM

ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಎದುರು ಈಜಲಾಗದೇ ಮುಳುಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಗದಗ ತಾಲೂಕಿನ ಬಾಳೆಹೊಸೂರು ನಿವಾಸಿ ಬಸವರಾಜ (35) ರಕ್ಷಣೆಗೊಳಗಾದ ಪ್ರವಾಸಿಗ.

ಕೆಎಸ್‌ಆರ್‌ಟಿಸಿ ಬಸ್ ಚಾಲಕನಾಗಿರುವ ಬಸವರಾಜ ಅವರು ಧರ್ಮಸ್ಥಳದಿಂದ ಮುರ್ಡೇಶ್ವರಕ್ಕೆ ಪ್ರವಾಸಿಗರನ್ನು ಕರೆತಂದಿದ್ದರು. ಕಡಲ ತೀರದಲ್ಲಿ ಬಸ್ ನಿಲ್ಲಿಸಿ ಸಮುದ್ರದಲ್ಲಿ ಈಜಾಡಲು ತೆರಳಿದ್ದು, ಈ ವೇಳೆ ಅಪ್ಪಳಿಸಿದ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಹಂತ ತಲುಪಿದ್ದರು. ಸಮುದ್ರದಲ್ಲಿ ಮುಳುಗುತ್ತಿದ್ದುದನ್ನು ಗಮನಿಸಿದ ಬೀಚ್ ಲೈಫ್‌ಗಾರ್ಡ್ ಶೇಖರ ದೇವಾಡಿಗ, ವಿಘ್ನೇಶ್ ಹರಿಕಂತ್ರ ಹಾಗೂ ಪ್ರವೀಣ್ ಓಶಿಯನ್ ಅಡ್ವೆಂಚರ್‌ ಬೋಟಿನ ಸಿಬ್ಬಂದಿ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಮುರ್ಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror