ಮುರುಡೇಶ್ವರ | ಪ್ರವಾಸಿಗನನ್ನು ರಕ್ಷಣೆ ಮಾಡಿದ ಬೀಚ್ ಲೈಫ್ ಗಾರ್ಡ್

December 30, 2022
8:41 PM

ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಎದುರು ಈಜಲಾಗದೇ ಮುಳುಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಗದಗ ತಾಲೂಕಿನ ಬಾಳೆಹೊಸೂರು ನಿವಾಸಿ ಬಸವರಾಜ (35) ರಕ್ಷಣೆಗೊಳಗಾದ ಪ್ರವಾಸಿಗ.

ಕೆಎಸ್‌ಆರ್‌ಟಿಸಿ ಬಸ್ ಚಾಲಕನಾಗಿರುವ ಬಸವರಾಜ ಅವರು ಧರ್ಮಸ್ಥಳದಿಂದ ಮುರ್ಡೇಶ್ವರಕ್ಕೆ ಪ್ರವಾಸಿಗರನ್ನು ಕರೆತಂದಿದ್ದರು. ಕಡಲ ತೀರದಲ್ಲಿ ಬಸ್ ನಿಲ್ಲಿಸಿ ಸಮುದ್ರದಲ್ಲಿ ಈಜಾಡಲು ತೆರಳಿದ್ದು, ಈ ವೇಳೆ ಅಪ್ಪಳಿಸಿದ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಹಂತ ತಲುಪಿದ್ದರು. ಸಮುದ್ರದಲ್ಲಿ ಮುಳುಗುತ್ತಿದ್ದುದನ್ನು ಗಮನಿಸಿದ ಬೀಚ್ ಲೈಫ್‌ಗಾರ್ಡ್ ಶೇಖರ ದೇವಾಡಿಗ, ವಿಘ್ನೇಶ್ ಹರಿಕಂತ್ರ ಹಾಗೂ ಪ್ರವೀಣ್ ಓಶಿಯನ್ ಅಡ್ವೆಂಚರ್‌ ಬೋಟಿನ ಸಿಬ್ಬಂದಿ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಮುರ್ಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ
ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ
May 12, 2026
7:37 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 11-05-2026 | ವಾಯುಭಾರ ಕುಸಿತದ ಲಕ್ಷಣ…? – ಸದ್ಯ ಗುಡುಗು ಮಳೆ ಮುಂದುವರಿಕೆ – ಕರಾವಳಿ-ಮಲೆನಾಡಿನಲ್ಲಿ ಸಂಜೆ ಮಳೆಯ ಅಬ್ಬರ ಸಾಧ್ಯ
May 11, 2026
2:25 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror