ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಎದುರು ಈಜಲಾಗದೇ ಮುಳುಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಗದಗ ತಾಲೂಕಿನ ಬಾಳೆಹೊಸೂರು ನಿವಾಸಿ ಬಸವರಾಜ (35) ರಕ್ಷಣೆಗೊಳಗಾದ ಪ್ರವಾಸಿಗ.
ಕೆಎಸ್ಆರ್ಟಿಸಿ ಬಸ್ ಚಾಲಕನಾಗಿರುವ ಬಸವರಾಜ ಅವರು ಧರ್ಮಸ್ಥಳದಿಂದ ಮುರ್ಡೇಶ್ವರಕ್ಕೆ ಪ್ರವಾಸಿಗರನ್ನು ಕರೆತಂದಿದ್ದರು. ಕಡಲ ತೀರದಲ್ಲಿ ಬಸ್ ನಿಲ್ಲಿಸಿ ಸಮುದ್ರದಲ್ಲಿ ಈಜಾಡಲು ತೆರಳಿದ್ದು, ಈ ವೇಳೆ ಅಪ್ಪಳಿಸಿದ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಹಂತ ತಲುಪಿದ್ದರು. ಸಮುದ್ರದಲ್ಲಿ ಮುಳುಗುತ್ತಿದ್ದುದನ್ನು ಗಮನಿಸಿದ ಬೀಚ್ ಲೈಫ್ಗಾರ್ಡ್ ಶೇಖರ ದೇವಾಡಿಗ, ವಿಘ್ನೇಶ್ ಹರಿಕಂತ್ರ ಹಾಗೂ ಪ್ರವೀಣ್ ಓಶಿಯನ್ ಅಡ್ವೆಂಚರ್ ಬೋಟಿನ ಸಿಬ್ಬಂದಿ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಮುರ್ಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…