ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಎದುರು ಈಜಲಾಗದೇ ಮುಳುಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಗದಗ ತಾಲೂಕಿನ ಬಾಳೆಹೊಸೂರು ನಿವಾಸಿ ಬಸವರಾಜ (35) ರಕ್ಷಣೆಗೊಳಗಾದ ಪ್ರವಾಸಿಗ.
ಕೆಎಸ್ಆರ್ಟಿಸಿ ಬಸ್ ಚಾಲಕನಾಗಿರುವ ಬಸವರಾಜ ಅವರು ಧರ್ಮಸ್ಥಳದಿಂದ ಮುರ್ಡೇಶ್ವರಕ್ಕೆ ಪ್ರವಾಸಿಗರನ್ನು ಕರೆತಂದಿದ್ದರು. ಕಡಲ ತೀರದಲ್ಲಿ ಬಸ್ ನಿಲ್ಲಿಸಿ ಸಮುದ್ರದಲ್ಲಿ ಈಜಾಡಲು ತೆರಳಿದ್ದು, ಈ ವೇಳೆ ಅಪ್ಪಳಿಸಿದ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಹಂತ ತಲುಪಿದ್ದರು. ಸಮುದ್ರದಲ್ಲಿ ಮುಳುಗುತ್ತಿದ್ದುದನ್ನು ಗಮನಿಸಿದ ಬೀಚ್ ಲೈಫ್ಗಾರ್ಡ್ ಶೇಖರ ದೇವಾಡಿಗ, ವಿಘ್ನೇಶ್ ಹರಿಕಂತ್ರ ಹಾಗೂ ಪ್ರವೀಣ್ ಓಶಿಯನ್ ಅಡ್ವೆಂಚರ್ ಬೋಟಿನ ಸಿಬ್ಬಂದಿ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಮುರ್ಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…