ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಎದುರು ಈಜಲಾಗದೇ ಮುಳುಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಗದಗ ತಾಲೂಕಿನ ಬಾಳೆಹೊಸೂರು ನಿವಾಸಿ ಬಸವರಾಜ (35) ರಕ್ಷಣೆಗೊಳಗಾದ ಪ್ರವಾಸಿಗ.
ಕೆಎಸ್ಆರ್ಟಿಸಿ ಬಸ್ ಚಾಲಕನಾಗಿರುವ ಬಸವರಾಜ ಅವರು ಧರ್ಮಸ್ಥಳದಿಂದ ಮುರ್ಡೇಶ್ವರಕ್ಕೆ ಪ್ರವಾಸಿಗರನ್ನು ಕರೆತಂದಿದ್ದರು. ಕಡಲ ತೀರದಲ್ಲಿ ಬಸ್ ನಿಲ್ಲಿಸಿ ಸಮುದ್ರದಲ್ಲಿ ಈಜಾಡಲು ತೆರಳಿದ್ದು, ಈ ವೇಳೆ ಅಪ್ಪಳಿಸಿದ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಹಂತ ತಲುಪಿದ್ದರು. ಸಮುದ್ರದಲ್ಲಿ ಮುಳುಗುತ್ತಿದ್ದುದನ್ನು ಗಮನಿಸಿದ ಬೀಚ್ ಲೈಫ್ಗಾರ್ಡ್ ಶೇಖರ ದೇವಾಡಿಗ, ವಿಘ್ನೇಶ್ ಹರಿಕಂತ್ರ ಹಾಗೂ ಪ್ರವೀಣ್ ಓಶಿಯನ್ ಅಡ್ವೆಂಚರ್ ಬೋಟಿನ ಸಿಬ್ಬಂದಿ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಮುರ್ಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…