Advertisement
MIRROR FOCUS

ಕೃಷಿಕನ ಸತತ ಪ್ರಯತ್ನದ ಫಲ | ಬೆಳಕಿಗೆ ಬಂದ ಹೊಸ ಖಾದ್ಯ ಅಣಬೆ ಪ್ರಭೇದ | ಅಂತರಾಷ್ಟ್ರೀಯ ಫುಡ್‌ ಜರ್ನಲ್‌ನಲ್ಲಿ ದಾಖಲು |

Share

ಪುತ್ತೂರಿನ ಮುಡಿಪಿನಡ್ಕದ ಕೃಷಿಕ ಹರೀಶ್ ರೈ ದೇರ್ಲ ಅವರು ತಮ್ಮ ಸತತ ಪ್ರಯತ್ನ ಹಾಗೂ ಸಿಪಿಸಿಆರ್‌ಐ ವಿಜ್ಞಾನಿಗಳ ಅಧ್ಯಯನದ ಕಾರಣದಿಂದ  ಭಾರತದ ವಿಶೇಷವಾದ ಅಣಬೆ ಪ್ರಭೇದವೊಂದನ್ನು ಅಂತರಾಷ್ಟ್ರೀಯ ಫುಡ್‌ ಜರ್ನಲ್‌ ನಲ್ಲಿ(EJFA) ದಾಖಲಾಗುವಂತೆ ಮಾಡಿದ್ದಾರೆ. …….ಮುಂದೆ ಓದಿ…..

ಪುತ್ತೂರಿನ ತಾಲೂಕಿನ ಮುಡಿಪಿನಡ್ಕದ ಕೃಷಿಕ  ಹರೀಶ್‌ ರೈ ಅವರು ಅಡಿಕೆ ಸಿಪ್ಪೆಯ ಮೂಲಕ  ನಿರ್ದಿಷ್ಟ ಪ್ರಭೇದದ ಅಣಬೆ ತಳಿಯನ್ನು ಕಳೆದ ಸುಮಾರು ಒಂದು ವರ್ಷದಿಂದ ಬೆಳೆಸುತ್ತಿದ್ದಾರೆ. ಇದೀಗ 24 ನೇ ಬ್ಯಾಚ್‌ ಮುಗಿಸಿದ್ದಾರೆ.  ಅನೇಕ ವರ್ಷಗಳಿಂದ ಅಡಿಕೆ ಸಿಪ್ಪೆಯಲ್ಲಿ ಬೆಳೆಯುವ ಅಣಬೆಯನ್ನು ಹರೀಶ್‌ ರೈ ಅವರ ಮಿತ್ರರೊಬ್ಬರು ಬಳಕೆ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದುಕೊಂಡು ತಾವೂ ಬೆಳೆಯಲು ಆರಂಭ ಮಾಡಿದರು. ಅಡಿಕೆ ಸಿಪ್ಪೆಯನ್ನು ಕೊಳೆಯಲು ಹಾಕುವ ವೇಳೆ ಅದರಲ್ಲಿ ಬರುವ ಅಣಬೆಯು ಬಹಳ ಅತ್ಯುತ್ತಮ ಆಹಾರವಾಗಿದೆ. ಹೀಗಾಗಿ ಈ ಬಗ್ಗೆ ಬೆಳೆಯವುದರ ಕಡೆಗೆ ಆಸಕ್ತರಾದರು. …….ಮುಂದೆ ಓದಿ…..

ಅಡಿಕೆ ಸಿಪ್ಪೆಯಲ್ಲಿ ಬೆಳೆಯುವ ಈ ಪ್ರಭೇದದ ಅಣಬೆಯ ಬಗ್ಗೆ ವಿಟ್ಲ ಮತ್ತು ಕಾಸರಗೋಡಿನ  ಸಿಪಿಸಿಆರ್‌ ಐ  ಸಂಶೋಧಕರು ಹಾಗೂ ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಕೆಲವು ಸಮಯಗಳ ಕಾಲ ಸೂಕ್ಷ್ಮವಾಗಿ ಗಮನಿಸಿ ಅಡಿಕೆ ಸಿಪ್ಪೆಯಲ್ಲಿ ಬೆಳೆಯುತ್ತಿರುವ ಕಾಪ್ರಿನೋಪ್ಸಿಸ್ ಸಿನೆರಿಯಾ ಎಂಬ  ಖಾದ್ಯ ಅಣಬೆ ಪ್ರಭೇದವನ್ನು ಗುರುತಿಸಿದ್ದಾರೆ.

ಈ ಅಧ್ಯಯನ ಹಾಗೂ ಕೃಷಿಕರ ಪ್ರಯತ್ನವು, ಸಂಶೋಧನೆಗಳನ್ನು ಅಂತರಾಷ್ಟ್ರೀಯ ಮಟ್ಟದ ಎಮಿರೇಟ್ಸ್ ಜರ್ನಲ್ ಆಫ್ ಫುಡ್ ಅಂಡ್ ಅಗ್ರಿಕಲ್ಚರ್‌ನಲ್ಲಿ ದಾಖಲಿಸಲಾಗಿದೆ. ಕಾಪ್ರಿನೋಪ್ಸಿಸ್ ತಳಿಯ ಅಣಬೆಯು ಸಾವಯವ ವಸ್ತು ಕೊಳೆಯುವಲ್ಲಿ ಅದರ ಪರಿಸರ ಪ್ರಾಮುಖ್ಯತೆಗಾಗಿ ಬೆಳೆಯುತ್ತದೆ. ಇದು ಖಾದ್ಯವಾಗಿ ಬಳಕೆ ಮಾಡಬಹುದಾಗಿದೆ.…….ಮುಂದೆ ಓದಿ…..

ಸತತವಾಗಿ 24 ಬ್ಯಾಚು ಅಣಬೆ ಕೃಷಿ ಮಾಡುವ ಮೂಲಕ ಒಂದು ವರ್ಷದ ಪೂರ್ತಿ ಅವಧಿಯಲ್ಲಿ ಅಡಿಕೆ ಸಿಪ್ಪೆಯಿಂದ ಅಣಬೆ ಬೆಳೆಸಿರುವ ಹರೀಶ್‌ ರೈ ಅವರು, ಮನೆಗೆ ತರಕಾರಿಯಾಗಿ ಈ ಅಣಬೆಯನ್ನು ಬೆಳೆಯಲು ಸಾಧ್ಯವಿದೆ. ಯಾವುದೇ ಹೆಚ್ಚಿನ ಆರೈಕೆ ಅಗತ್ಯವಿಲ್ಲ ಎಂದು ಹೇಳುತ್ತಾರೆ.  ಕುತೂಹಲಕಾರಿಯಾದ ಅಂಶವೆಂದರೆ, ಇಲ್ಲಿ ಅಣಬೆ ಬೆಳೆಯಲು ಯಾವುದೇ ಬೀಜ ನಾಟಿ ಮಾಡಬೇಕಾಗಿಲ್ಲ. ಆ ಕೆಲಸವನ್ನು ಪ್ರಕೃತಿಯೇ ಮಾಡುತ್ತದೆ. ಹೀಗಾಗಿ ಈ ಕೃಷಿಯು ಹೆಚ್ಚಿನ ಗಮನ ಸೆಳೆದಿದೆ. ಈ ಕಾರಣದಿಂದಲೇ ವಿವಿಧ ಕ್ಷೇತ್ರಗಳ ವಿಜ್ಞಾನಿಗಳ ಗಮನವೂ ಸೆಳೆದಿವೆ ಈ ಅಣಬೆ.

ತಿನ್ನಬಹುದಾದ ಅಣಬೆ ಇದಾದ್ದರಿಂದ , ವಾಣಿಜ್ಯ ಉದ್ದೇಶಕ್ಕಾಗಿ ಹೇಗೆ ಬಳಕೆ ಮಾಡಬಹುದು ಎನ್ನುವುದರ ಬಗ್ಗೆ ಇನ್ನಷ್ಟೇ ಚಿಂತನೆ, ಪ್ರಯತ್ನ ನಡೆಯಬೇಕಿದೆ. ಮುಂದಿನ ದಿನಗಳಲ್ಲಿ ಈ ಅಣಬೆಯೂ  ರೆಸ್ಟೋರೆಂಟ್‌ ಪ್ರವೇಶಿಸಲು ಕೆಲಸ ನಡೆಯಬೇಕಿದೆ.

ಹೀಗಾಗಿ ವಿಜ್ಞಾನಿಗಳು ಈ ಬಗ್ಗೆ ಮತ್ತಷ್ಟು ಅಧ್ಯಯನ ನಡೆಸುತ್ತಿದ್ದು, ಅಣಬೆ ಸರಿಯಾಗಿ ಬೆಳೆಯಲು ಹಾಗೂ ಪೋಷಕಾಂಶಗಳನ್ನು ಹೇಗೆ ನೀಡಬಹುದು ಇತ್ಯಾದಿಗಳ ಬಗ್ಗೆಯೂ ಅಧ್ಯಯನ ನಡೆಸಲಾಗುತ್ತಿದೆ ಎಂದು ಜರ್ನಲ್‌ನಲ್ಲಿ  ಉಲ್ಲೇಖಿಸಲಾಗಿದೆ. …….ಮುಂದೆ ಓದಿ…..

 

283 ಕಾಡು ಖಾದ್ಯ ಅಣಬೆಗಳಿಗೆ ನೆಲೆಯಾಗಿರುವ ಭಾರತವು ವಿಶ್ವದ 2000 ಕಾಡು ಖಾದ್ಯ ಅಣಬೆಗಳ ಪ್ರಭೇದವನ್ನು ಹೊಂದಿವೆ.  ಹೀಗಾಗಿ ಅಡಿಕೆ ಸಿಪ್ಪೆಯ ಅಣಬೆಯು ಖಾದ್ಯವಾಗಿ ಬಳಕೆ ಮಾಡಬಹುದು ಎನ್ನುವುದು ಈಗ ಹೆಚ್ಚಿನ ಮಹತ್ವ ಪಡೆದಿದೆ.  ವಿಶೇಷವಾಗಿ ಸಸ್ಯಾಹಾರಿಗಳಲ್ಲಿ ಅಣಬೆಯ ಜನಪ್ರಿಯತೆಯ ಪರಿಣಾಮವಾಗಿ ಸಸ್ಯಾಹಾರದ ಮಾದರಿಯನ್ನು ನಿರೀಕ್ಷೆ ಮಾಡುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

15 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

15 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago