ಕೃಷಿ ಸಖಿಯರಿಂದ ಪ್ರಥಮ ಬಾರಿಗೆ ಅಣಬೆ ಕೃಷಿ ಮಾಹಿತಿ ಕಾರ್ಯಾಗಾರ

November 12, 2025
11:41 AM

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ  ವಿಟ್ಲ, 3F ಆಯಿಲ್ ಕಂಪೆನಿ  ಇದರ ಜಂಟಿ ಆಶ್ರಯದಲ್ಲಿ “ಅಣಬೆ ಕೃಷಿ ಮಾಹಿತಿ, ತಾಳೆ ಬೆಳೆ ಹಾಗೂ ರೇಷ್ಮೆ ಮತ್ತು ತೋಟಗಾರಿಕಾ ಬೆಳೆಗಳ ಕುರಿತು ಮಾಹಿತಿ ಕಾರ್ಯಾಗಾರ” ಸಂಜೀವಿನಿ ಕಟ್ಟಡ ಅಡ್ಕಾರಿನಲ್ಲಿ ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಒಕ್ಕೂಟ ಅಧ್ಯಕ್ಷೆ  ಕುಸುಮಾವತಿ  ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ  ಸಾವಿತ್ರಿ ಅಡ್ಕಾರು, 3F ಆಯಿಲ್ ಕಂಪೆನಿ  ಏರಿಯಾ ಮ್ಯಾನೇಜರ್  ಕೃಷ್ಣಾ ವೈ. ಟಿ., ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ  ಶ್ವೇತ ಎನ್ (ಎನ್.ಆರ್.ಎಲ್.ಎಂ.), BRP PRI  ಜಯಲಕ್ಷ್ಮೀ (ತಾಲೂಕು ಪಂಚಾಯತ್, ಸುಳ್ಯ) ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ಕೇಂದ್ರ ವಿಟ್ಲದ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಕೃಷಿ ಇಲಾಖೆಯಿಂದ ತರಬೇತಿ ಪಡೆದ ಜಾಲ್ಸೂರು, ಆಲೆಟ್ಟಿ, ಮಡಪ್ಪಾಡಿ, ಕನಕಮಜಲು ಹಾಗೂ ಸಂಪಾಜೆ ಗ್ರಾಮದ ಕೃಷಿ ಸಖಿಯರು ರೈತರು ಮತ್ತು ಮಹಿಳಾ ಸದಸ್ಯರಿಗೆ ಅಣಬೆ ಕೃಷಿಯ ಪ್ರಾತ್ಯಕ್ಷಿಕೆ ಮೂಲಕ ಸಂಪೂರ್ಣ ಮಾಹಿತಿ ನೀಡಿ, ತೋಟಗಾರಿಕೆ, ಎಫ್ ಪಿ ಓ, ಕೃಷಿ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ವಿವರಿಸಿದರು. ಈ ಸಂದರ್ಭ ಆಲೆಟ್ಟಿಯ ಯುವ ರೈತರಾದ ಆಕಾಶ್ ಅವರು ಕೃಷಿ ಸಖಿಯರಿಗೆ ತಾಂತ್ರಿಕ ಮಾಹಿತಿ ನೀಡಿ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಮಾದಕ ಮುಕ್ತ ಕರ್ನಾಟಕ ಅಭಿಯಾನ ಕುರಿತು ಮಾಹಿತಿ ನೀಡಲಾಗಿದ್ದು, BRP PRI  ಜಯಲಕ್ಷ್ಮೀ ಅವರಿಂದ ಪ್ರತಿಜ್ಞೆ ಬೋಧನೆ ನಡೆಯಿತು. ಕಾರ್ಯಕ್ರಮದಲ್ಲಿ MBK, LCRP, ಕೃಷಿ ಸಖಿಯರು, ಪದಾಧಿಕಾರಿಗಳು, ಸದಸ್ಯರು, VRW ಹಾಗೂ ರೈತರು ಉಪಸ್ಥಿತರಿದ್ದರು.
MBK ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು, ಸವಿತಾ ಸ್ವಾಗತಿಸಿದರು, ವಿಜಯ ಕೃಷಿ ಸಖಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror