ರೂರಲ್ ಮಿರರ್ ಪ್ರಕಾಶನದ ಕೊರೋನಾ ಸಮಯದ ಪಾಸಿಟಿವ್ ಸಂಗತಿಗಳ ಬಗೆಗಿನ ಹಿರಿಯ ಬರಹಗಾರ , ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆಯಾಗಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಬಂದಿರುವ ಈ ಪುಸ್ತಕ ಇದೀಗ ಆನ್ ಲೈನ್ ಮೂಲಕವೂ ಖರೀದಿಗೆ ಅವಕಾಶ ಮಾಡಲಾಗಿದ್ದು, ಆಸಕ್ತರು ಖರೀದಿ ಮಾಡಬಹುದಾಗಿದೆ. ಕೆಳಗಿನ ಫೋಟೋದಲ್ಲಿ ಈ ಬಗ್ಗೆ ವಿವರ ನೀಡಲಾಗಿದೆ.
ಪುಸ್ತಕದ ಬಗ್ಗೆ ಡಾ . ಬಿ .ಎ . ವಿವೇಕ ರೈ ಅವರು ಹೀಗೆ ಹೇಳಿದ್ದಾರೆ,
ಕೊರೋನ ಉಂಟುಮಾಡಿದ ಬಹುರೂಪಿ ಪಾಸಿಟಿವ್ ಪರಿಣಾಮಗಳನ್ನು ನೈಜ ಘಟನೆಗಳ ನಿದರ್ಶನಗಳ ಮೂಲಕ ಮನಮುಟ್ಟುವಂತೆ ವರ್ಣಿಸಿದ್ದೀರಿ . ಈ ಪುಸ್ತಕದ ಒಂದೊಂದು ಕಿರು ಕಥನವೂ ಬದುಕು ಕಟ್ಟುವ ಒಂದೊಂದು ಸಾಹಸಗಾಥೆಯಾಗಿದೆ . ಸಂಕಷ್ಟದ ಕಾಲದಲ್ಲಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ , ಹೊಸ ಬದುಕನ್ನು ಕಟ್ಟಬಹುದು ಎಂದು ಮಾಡಿ ತೋರಿಸಿದ ಜನರು ನಮಗೆ ನಿಜವಾದ ಮಾರ್ಗದರ್ಶಕರಾಗಿದ್ದಾರೆ . ನೂರು ಉಪದೇಶಗಳಿಗಿಂತ ಇಂತಹ ಒಂದು ದಿಟ್ಟಹೆಜ್ಜೆ ಹೆಚ್ಚು ಆತ್ಮವಿಶ್ವಾಸವನ್ನು ಉಂಟುಮಾಡುತ್ತದೆ . ಬದುಕನ್ನು ಹೊಸತಾಗಿ ಕಟ್ಟುವವರು , ಹಳ್ಳಿಗಳ ನೈಸರ್ಗಿಕ ಸುಖವನ್ನು ಅರಸುವವರು , ಕೃಷಿಯ ಮೂಲಕ ಜೀವನಪ್ರೀತಿಯನ್ನು ಬೆಳೆಸಿಕೊಳ್ಳುವವರು , ಸಾವಯವ ಸಾಮೂಹಿಕ ಜೀವನಕ್ಕೆ ಒಲಿಯುವವರು ಓದಬೇಕಾದ ಪುಸ್ತಕ ‘ ಮುಸ್ಸಂಜೆಯ ಹೊಂಗಿರಣ ‘ . ಅದು ಗಾತ್ರದಲ್ಲಿ ಕಿರಿದಾದುದು , ಸೂತ್ರದಲ್ಲಿ ಹಿರಿದಾದುದು .
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…