ರೂರಲ್ ಮಿರರ್ ಪ್ರಕಾಶನದ ಕೊರೋನಾ ಸಮಯದ ಪಾಸಿಟಿವ್ ಸಂಗತಿಗಳ ಬಗೆಗಿನ ಹಿರಿಯ ಬರಹಗಾರ , ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆಯಾಗಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಬಂದಿರುವ ಈ ಪುಸ್ತಕ ಇದೀಗ ಆನ್ ಲೈನ್ ಮೂಲಕವೂ ಖರೀದಿಗೆ ಅವಕಾಶ ಮಾಡಲಾಗಿದ್ದು, ಆಸಕ್ತರು ಖರೀದಿ ಮಾಡಬಹುದಾಗಿದೆ. ಕೆಳಗಿನ ಫೋಟೋದಲ್ಲಿ ಈ ಬಗ್ಗೆ ವಿವರ ನೀಡಲಾಗಿದೆ.
ಪುಸ್ತಕದ ಬಗ್ಗೆ ಡಾ . ಬಿ .ಎ . ವಿವೇಕ ರೈ ಅವರು ಹೀಗೆ ಹೇಳಿದ್ದಾರೆ,
ಕೊರೋನ ಉಂಟುಮಾಡಿದ ಬಹುರೂಪಿ ಪಾಸಿಟಿವ್ ಪರಿಣಾಮಗಳನ್ನು ನೈಜ ಘಟನೆಗಳ ನಿದರ್ಶನಗಳ ಮೂಲಕ ಮನಮುಟ್ಟುವಂತೆ ವರ್ಣಿಸಿದ್ದೀರಿ . ಈ ಪುಸ್ತಕದ ಒಂದೊಂದು ಕಿರು ಕಥನವೂ ಬದುಕು ಕಟ್ಟುವ ಒಂದೊಂದು ಸಾಹಸಗಾಥೆಯಾಗಿದೆ . ಸಂಕಷ್ಟದ ಕಾಲದಲ್ಲಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ , ಹೊಸ ಬದುಕನ್ನು ಕಟ್ಟಬಹುದು ಎಂದು ಮಾಡಿ ತೋರಿಸಿದ ಜನರು ನಮಗೆ ನಿಜವಾದ ಮಾರ್ಗದರ್ಶಕರಾಗಿದ್ದಾರೆ . ನೂರು ಉಪದೇಶಗಳಿಗಿಂತ ಇಂತಹ ಒಂದು ದಿಟ್ಟಹೆಜ್ಜೆ ಹೆಚ್ಚು ಆತ್ಮವಿಶ್ವಾಸವನ್ನು ಉಂಟುಮಾಡುತ್ತದೆ . ಬದುಕನ್ನು ಹೊಸತಾಗಿ ಕಟ್ಟುವವರು , ಹಳ್ಳಿಗಳ ನೈಸರ್ಗಿಕ ಸುಖವನ್ನು ಅರಸುವವರು , ಕೃಷಿಯ ಮೂಲಕ ಜೀವನಪ್ರೀತಿಯನ್ನು ಬೆಳೆಸಿಕೊಳ್ಳುವವರು , ಸಾವಯವ ಸಾಮೂಹಿಕ ಜೀವನಕ್ಕೆ ಒಲಿಯುವವರು ಓದಬೇಕಾದ ಪುಸ್ತಕ ‘ ಮುಸ್ಸಂಜೆಯ ಹೊಂಗಿರಣ ‘ . ಅದು ಗಾತ್ರದಲ್ಲಿ ಕಿರಿದಾದುದು , ಸೂತ್ರದಲ್ಲಿ ಹಿರಿದಾದುದು .
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…