Advertisement
ಸುದ್ದಿಗಳು

ರೂರಲ್‌ ಮಿರರ್‌ ಪ್ರಕಾಶನದ ಪುಸ್ತಕ “ಮುಸ್ಸಂಜೆಯ ಹೊಂಗಿರಣ” ಆನ್‌ ಲೈನ್‌ ಖರೀದಿಗೆ ಅವಕಾಶ

Share

ರೂರಲ್‌ ಮಿರರ್‌ ಪ್ರಕಾಶನದ ಕೊರೋನಾ ಸಮಯದ ಪಾಸಿಟಿವ್‌ ಸಂಗತಿಗಳ ಬಗೆಗಿನ ಹಿರಿಯ ಬರಹಗಾರ , ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆಯಾಗಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಬಂದಿರುವ ಈ ಪುಸ್ತಕ ಇದೀಗ ಆನ್‌ ಲೈನ್‌ ಮೂಲಕವೂ ಖರೀದಿಗೆ ಅವಕಾಶ ಮಾಡಲಾಗಿದ್ದು, ಆಸಕ್ತರು ಖರೀದಿ ಮಾಡಬಹುದಾಗಿದೆ. ಕೆಳಗಿನ ಫೋಟೋದಲ್ಲಿ ಈ ಬಗ್ಗೆ ವಿವರ ನೀಡಲಾಗಿದೆ.

 

ಪುಸ್ತಕದ ಬಗ್ಗೆ ಡಾ . ಬಿ .ಎ . ವಿವೇಕ ರೈ ಅವರು ಹೀಗೆ ಹೇಳಿದ್ದಾರೆ

ಕೊರೋನ ಉಂಟುಮಾಡಿದ ಬಹುರೂಪಿ ಪಾಸಿಟಿವ್ ಪರಿಣಾಮಗಳನ್ನು ನೈಜ ಘಟನೆಗಳ ನಿದರ್ಶನಗಳ ಮೂಲಕ ಮನಮುಟ್ಟುವಂತೆ ವರ್ಣಿಸಿದ್ದೀರಿ . ಈ ಪುಸ್ತಕದ ಒಂದೊಂದು ಕಿರು ಕಥನವೂ ಬದುಕು ಕಟ್ಟುವ ಒಂದೊಂದು ಸಾಹಸಗಾಥೆಯಾಗಿದೆ . ಸಂಕಷ್ಟದ ಕಾಲದಲ್ಲಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ , ಹೊಸ ಬದುಕನ್ನು ಕಟ್ಟಬಹುದು ಎಂದು ಮಾಡಿ ತೋರಿಸಿದ ಜನರು ನಮಗೆ ನಿಜವಾದ ಮಾರ್ಗದರ್ಶಕರಾಗಿದ್ದಾರೆ . ನೂರು ಉಪದೇಶಗಳಿಗಿಂತ ಇಂತಹ ಒಂದು ದಿಟ್ಟಹೆಜ್ಜೆ ಹೆಚ್ಚು ಆತ್ಮವಿಶ್ವಾಸವನ್ನು ಉಂಟುಮಾಡುತ್ತದೆ . ಬದುಕನ್ನು ಹೊಸತಾಗಿ ಕಟ್ಟುವವರು , ಹಳ್ಳಿಗಳ ನೈಸರ್ಗಿಕ ಸುಖವನ್ನು ಅರಸುವವರು , ಕೃಷಿಯ ಮೂಲಕ ಜೀವನಪ್ರೀತಿಯನ್ನು ಬೆಳೆಸಿಕೊಳ್ಳುವವರು , ಸಾವಯವ ಸಾಮೂಹಿಕ ಜೀವನಕ್ಕೆ ಒಲಿಯುವವರು ಓದಬೇಕಾದ ಪುಸ್ತಕ ‘ ಮುಸ್ಸಂಜೆಯ ಹೊಂಗಿರಣ ‘ . ಅದು ಗಾತ್ರದಲ್ಲಿ ಕಿರಿದಾದುದು , ಸೂತ್ರದಲ್ಲಿ ಹಿರಿದಾದುದು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

5 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

16 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

20 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

21 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

23 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

24 hours ago