ರೂರಲ್ ಮಿರರ್ ಪ್ರಕಾಶನದ ಕೊರೋನಾ ಸಮಯದ ಪಾಸಿಟಿವ್ ಸಂಗತಿಗಳ ಬಗೆಗಿನ ಹಿರಿಯ ಬರಹಗಾರ , ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆಯಾಗಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಬಂದಿರುವ ಈ ಪುಸ್ತಕ ಇದೀಗ ಆನ್ ಲೈನ್ ಮೂಲಕವೂ ಖರೀದಿಗೆ ಅವಕಾಶ ಮಾಡಲಾಗಿದ್ದು, ಆಸಕ್ತರು ಖರೀದಿ ಮಾಡಬಹುದಾಗಿದೆ. ಕೆಳಗಿನ ಫೋಟೋದಲ್ಲಿ ಈ ಬಗ್ಗೆ ವಿವರ ನೀಡಲಾಗಿದೆ.
ಪುಸ್ತಕದ ಬಗ್ಗೆ ಡಾ . ಬಿ .ಎ . ವಿವೇಕ ರೈ ಅವರು ಹೀಗೆ ಹೇಳಿದ್ದಾರೆ,
ಕೊರೋನ ಉಂಟುಮಾಡಿದ ಬಹುರೂಪಿ ಪಾಸಿಟಿವ್ ಪರಿಣಾಮಗಳನ್ನು ನೈಜ ಘಟನೆಗಳ ನಿದರ್ಶನಗಳ ಮೂಲಕ ಮನಮುಟ್ಟುವಂತೆ ವರ್ಣಿಸಿದ್ದೀರಿ . ಈ ಪುಸ್ತಕದ ಒಂದೊಂದು ಕಿರು ಕಥನವೂ ಬದುಕು ಕಟ್ಟುವ ಒಂದೊಂದು ಸಾಹಸಗಾಥೆಯಾಗಿದೆ . ಸಂಕಷ್ಟದ ಕಾಲದಲ್ಲಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ , ಹೊಸ ಬದುಕನ್ನು ಕಟ್ಟಬಹುದು ಎಂದು ಮಾಡಿ ತೋರಿಸಿದ ಜನರು ನಮಗೆ ನಿಜವಾದ ಮಾರ್ಗದರ್ಶಕರಾಗಿದ್ದಾರೆ . ನೂರು ಉಪದೇಶಗಳಿಗಿಂತ ಇಂತಹ ಒಂದು ದಿಟ್ಟಹೆಜ್ಜೆ ಹೆಚ್ಚು ಆತ್ಮವಿಶ್ವಾಸವನ್ನು ಉಂಟುಮಾಡುತ್ತದೆ . ಬದುಕನ್ನು ಹೊಸತಾಗಿ ಕಟ್ಟುವವರು , ಹಳ್ಳಿಗಳ ನೈಸರ್ಗಿಕ ಸುಖವನ್ನು ಅರಸುವವರು , ಕೃಷಿಯ ಮೂಲಕ ಜೀವನಪ್ರೀತಿಯನ್ನು ಬೆಳೆಸಿಕೊಳ್ಳುವವರು , ಸಾವಯವ ಸಾಮೂಹಿಕ ಜೀವನಕ್ಕೆ ಒಲಿಯುವವರು ಓದಬೇಕಾದ ಪುಸ್ತಕ ‘ ಮುಸ್ಸಂಜೆಯ ಹೊಂಗಿರಣ ‘ . ಅದು ಗಾತ್ರದಲ್ಲಿ ಕಿರಿದಾದುದು , ಸೂತ್ರದಲ್ಲಿ ಹಿರಿದಾದುದು .
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…