Advertisement
ಸುದ್ದಿಗಳು

ರೂರಲ್‌ ಮಿರರ್‌ ಪ್ರಕಾಶನದ ಪುಸ್ತಕ “ಮುಸ್ಸಂಜೆಯ ಹೊಂಗಿರಣ” ಆನ್‌ ಲೈನ್‌ ಖರೀದಿಗೆ ಅವಕಾಶ

Share

ರೂರಲ್‌ ಮಿರರ್‌ ಪ್ರಕಾಶನದ ಕೊರೋನಾ ಸಮಯದ ಪಾಸಿಟಿವ್‌ ಸಂಗತಿಗಳ ಬಗೆಗಿನ ಹಿರಿಯ ಬರಹಗಾರ , ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆಯಾಗಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಬಂದಿರುವ ಈ ಪುಸ್ತಕ ಇದೀಗ ಆನ್‌ ಲೈನ್‌ ಮೂಲಕವೂ ಖರೀದಿಗೆ ಅವಕಾಶ ಮಾಡಲಾಗಿದ್ದು, ಆಸಕ್ತರು ಖರೀದಿ ಮಾಡಬಹುದಾಗಿದೆ. ಕೆಳಗಿನ ಫೋಟೋದಲ್ಲಿ ಈ ಬಗ್ಗೆ ವಿವರ ನೀಡಲಾಗಿದೆ.

 

ಪುಸ್ತಕದ ಬಗ್ಗೆ ಡಾ . ಬಿ .ಎ . ವಿವೇಕ ರೈ ಅವರು ಹೀಗೆ ಹೇಳಿದ್ದಾರೆ

ಕೊರೋನ ಉಂಟುಮಾಡಿದ ಬಹುರೂಪಿ ಪಾಸಿಟಿವ್ ಪರಿಣಾಮಗಳನ್ನು ನೈಜ ಘಟನೆಗಳ ನಿದರ್ಶನಗಳ ಮೂಲಕ ಮನಮುಟ್ಟುವಂತೆ ವರ್ಣಿಸಿದ್ದೀರಿ . ಈ ಪುಸ್ತಕದ ಒಂದೊಂದು ಕಿರು ಕಥನವೂ ಬದುಕು ಕಟ್ಟುವ ಒಂದೊಂದು ಸಾಹಸಗಾಥೆಯಾಗಿದೆ . ಸಂಕಷ್ಟದ ಕಾಲದಲ್ಲಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ , ಹೊಸ ಬದುಕನ್ನು ಕಟ್ಟಬಹುದು ಎಂದು ಮಾಡಿ ತೋರಿಸಿದ ಜನರು ನಮಗೆ ನಿಜವಾದ ಮಾರ್ಗದರ್ಶಕರಾಗಿದ್ದಾರೆ . ನೂರು ಉಪದೇಶಗಳಿಗಿಂತ ಇಂತಹ ಒಂದು ದಿಟ್ಟಹೆಜ್ಜೆ ಹೆಚ್ಚು ಆತ್ಮವಿಶ್ವಾಸವನ್ನು ಉಂಟುಮಾಡುತ್ತದೆ . ಬದುಕನ್ನು ಹೊಸತಾಗಿ ಕಟ್ಟುವವರು , ಹಳ್ಳಿಗಳ ನೈಸರ್ಗಿಕ ಸುಖವನ್ನು ಅರಸುವವರು , ಕೃಷಿಯ ಮೂಲಕ ಜೀವನಪ್ರೀತಿಯನ್ನು ಬೆಳೆಸಿಕೊಳ್ಳುವವರು , ಸಾವಯವ ಸಾಮೂಹಿಕ ಜೀವನಕ್ಕೆ ಒಲಿಯುವವರು ಓದಬೇಕಾದ ಪುಸ್ತಕ ‘ ಮುಸ್ಸಂಜೆಯ ಹೊಂಗಿರಣ ‘ . ಅದು ಗಾತ್ರದಲ್ಲಿ ಕಿರಿದಾದುದು , ಸೂತ್ರದಲ್ಲಿ ಹಿರಿದಾದುದು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

7 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

7 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

1 day ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago