ರೂರಲ್ ಮಿರರ್ ಪ್ರಕಾಶನದ ಕೊರೋನಾ ಸಮಯದ ಪಾಸಿಟಿವ್ ಸಂಗತಿಗಳ ಬಗೆಗಿನ ಹಿರಿಯ ಬರಹಗಾರ , ಪತ್ರಕರ್ತ ನಾ.ಕಾರಂತ ಪೆರಾಜೆ ಅವರು ಬರೆದಿರುವ “ಮುಸ್ಸಂಜೆಯ ಹೊಂಗಿರಣ” ಪುಸ್ತಕ ಬಿಡುಗಡೆಯಾಗಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಬಂದಿರುವ ಈ ಪುಸ್ತಕ ಇದೀಗ ಆನ್ ಲೈನ್ ಮೂಲಕವೂ ಖರೀದಿಗೆ ಅವಕಾಶ ಮಾಡಲಾಗಿದ್ದು, ಆಸಕ್ತರು ಖರೀದಿ ಮಾಡಬಹುದಾಗಿದೆ. ಕೆಳಗಿನ ಫೋಟೋದಲ್ಲಿ ಈ ಬಗ್ಗೆ ವಿವರ ನೀಡಲಾಗಿದೆ.
ಪುಸ್ತಕದ ಬಗ್ಗೆ ಡಾ . ಬಿ .ಎ . ವಿವೇಕ ರೈ ಅವರು ಹೀಗೆ ಹೇಳಿದ್ದಾರೆ,
ಕೊರೋನ ಉಂಟುಮಾಡಿದ ಬಹುರೂಪಿ ಪಾಸಿಟಿವ್ ಪರಿಣಾಮಗಳನ್ನು ನೈಜ ಘಟನೆಗಳ ನಿದರ್ಶನಗಳ ಮೂಲಕ ಮನಮುಟ್ಟುವಂತೆ ವರ್ಣಿಸಿದ್ದೀರಿ . ಈ ಪುಸ್ತಕದ ಒಂದೊಂದು ಕಿರು ಕಥನವೂ ಬದುಕು ಕಟ್ಟುವ ಒಂದೊಂದು ಸಾಹಸಗಾಥೆಯಾಗಿದೆ . ಸಂಕಷ್ಟದ ಕಾಲದಲ್ಲಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ , ಹೊಸ ಬದುಕನ್ನು ಕಟ್ಟಬಹುದು ಎಂದು ಮಾಡಿ ತೋರಿಸಿದ ಜನರು ನಮಗೆ ನಿಜವಾದ ಮಾರ್ಗದರ್ಶಕರಾಗಿದ್ದಾರೆ . ನೂರು ಉಪದೇಶಗಳಿಗಿಂತ ಇಂತಹ ಒಂದು ದಿಟ್ಟಹೆಜ್ಜೆ ಹೆಚ್ಚು ಆತ್ಮವಿಶ್ವಾಸವನ್ನು ಉಂಟುಮಾಡುತ್ತದೆ . ಬದುಕನ್ನು ಹೊಸತಾಗಿ ಕಟ್ಟುವವರು , ಹಳ್ಳಿಗಳ ನೈಸರ್ಗಿಕ ಸುಖವನ್ನು ಅರಸುವವರು , ಕೃಷಿಯ ಮೂಲಕ ಜೀವನಪ್ರೀತಿಯನ್ನು ಬೆಳೆಸಿಕೊಳ್ಳುವವರು , ಸಾವಯವ ಸಾಮೂಹಿಕ ಜೀವನಕ್ಕೆ ಒಲಿಯುವವರು ಓದಬೇಕಾದ ಪುಸ್ತಕ ‘ ಮುಸ್ಸಂಜೆಯ ಹೊಂಗಿರಣ ‘ . ಅದು ಗಾತ್ರದಲ್ಲಿ ಕಿರಿದಾದುದು , ಸೂತ್ರದಲ್ಲಿ ಹಿರಿದಾದುದು .
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…