Advertisement
MIRROR FOCUS

ʼಮುಸ್ಸಂಜೆಯ ಹೊಂಗಿರಣ’ ಪುಸ್ತಕ ಬಿಡುಗಡೆ | ಸಂಕಷ್ಟದ ಸಮಯದಲ್ಲಿ ಗಾಂಧಿಯನ್ ಆರ್ಥಿಕತೆಯ ಪರಿಚಯ – ಅರವಿಂದ ಚೊಕ್ಕಾಡಿ

Share

ಸಮಾಜದಲ್ಲಿ ಸಂಕಷ್ಟದ ಸಮಯ ಬಂದಾಗ ಗಾಂಧಿಯನ್ ಆರ್ಥಿಕತೆ ಸಮಾಜವನ್ನು ರಕ್ಷಣೆ ಮಾಡುತ್ತದೆ. ಇದಕ್ಕೆ ಉದಾಹರಣೆ ಕೊರೋನಾ. ಕೊರೋನಾದ ಸಂಕಷ್ಟದ ಸಮಯದಲ್ಲಿ ಈ ಗಾಂಧಿಯನ್‌ ಆರ್ಥಿಕತೆ ಸಮುದಾಯಗಳನ್ನು ರಕ್ಷಿಸಿಕೊಳ್ಳುತ್ತಾ ಸಾಗಿದೆ. ಇದೆಲ್ಲಾ ಸಂಗತಿಗಳು ದಾಖಲು ರೂಪದಲ್ಲಿ ಮುಸ್ಸಂಜೆಯ ಹೊಂಗಿರಣದಲ್ಲಿ ಕಂಡುಬರುತ್ತದೆ ಎಂದು ಸಾಹಿತಿ, ಶಿಕ್ಷಕ ಅರವಿಂದ ಚೊಕ್ಕಾಡಿ ಹೇಳಿದರು.

Advertisement
Advertisement

ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆದ ನಾ. ಕಾರಂತ,ಪೆರಾಜೆ ಅವರ ‘ ಮುಸ್ಸಂಜೆಯ ಹೊಂಗಿರಣ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.ಈ ಪುಸ್ತಕದಲ್ಲಿ ಬರುವ ವ್ಯಕ್ತಿಗಳು ಗಾಂಧಿಯನ್ ಆರ್ಥಿಕತೆಯನ್ನು ಅಭ್ಯಾಸ ಮಾಡಿದ್ದರೆಂದು ಅಲ್ಲ. ಗಾಂಧಿ ಹೇಳುವ ಮೊದಲೂ ಇದೆಲ್ಲ ನಮ್ಮ ಸಮಾಜದಲ್ಲಿ ಇತ್ತು. ಆದರೆ ನಮ್ಮ ಸಮಾಜದಲ್ಲಿ ನಿಜವಾಗಿ ಏನಿದೆ ಎಂಬುದನ್ನು ಹುಡುಕಲು ಗಾಂಧಿಗೆ ಮಾತ್ರ ಗೊತ್ತಿತ್ತು. ತಾನು ಹುಡುಕಿದ್ದನ್ನು ವ್ಯವಸ್ಥಿತವಾಗಿ ಗಾಂಧೀಜಿ ಹೇಳಿದರು ಎಂದರು.ಗಾಂಧಿಯನ್ ಇಕಾನಮಿ ಎಂದರೆ ಏನು?,ಇದೇ. ಸ್ವಾವಲಂಬಿ ಆರ್ಥಿಕತೆಯೇ ಗಾಂಧಿ ಚಿಂತನೆಯ ಆರ್ಥಿಕತೆ, ಇದೆಲ್ಲಾ ಈ ಪುಸ್ತಕದಲ್ಲಿ ದಾಖಲಾಗಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣಾವಿನಯಚಂದ್ರ ಕಿಲಂಗೋಡಿ ಮಾತನಾಡಿ,ದೇಶದಲ್ಲಿ ನಿಜವಾದ ಸ್ವಂತಿಕೆ ಇರುವುದು ಹಳ್ಳಿಗಳಲ್ಲಿ.ಕೊರೋನಾದಂತಹ ಸಮಯದಲ್ಲೂ ಹಳ್ಳಿಗಳು ಸೋಲಲಿಲ್ಲ, ಗಟ್ಟಿಯಾಗಿ ಬೆಳೆದವು. ಸಮಾಜದಲ್ಲಿ ಇರುವ ಧನಾತ್ಮಕ ಸಂಗತಿಗಳು ಹೆಚ್ಚು ಚರ್ಚೆಯಾಗಬೇಕು ಎಂದರು.

 

ಬರಹಗಾರ ನಾ.ಕಾರಂತ ಪೆರಾಜೆ ಮಾತನಾಡಿ ಕೊರೋನಾವು ಸಮಾಜದಲ್ಲಿ ಒಮ್ಮೆಲ್ಲೇ ತಲ್ಲಣ ಮೂಡಿಸಿತು. ಇದೇ ಸಮಯದಲ್ಲಿ ಅನೇಕ ಧನಾತ್ಮಕವಾದ ಬದಲಾವಣೆಗಳು ಕಂಡವು. ಇದರ ದಾಖಲಾತಿ ಅತೀ ಅಗತ್ಯವಾಗಿತ್ತು ಎಂದು ಹೇಳಿದರು.

ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಪ್ರಮೋದ್‌ ಶುಭ ಹಾರೈಸಿದರು. ವೇದಿಕೆಯಲ್ಲಿ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೂಪಾ ಉಪಸ್ಥಿತರಿದ್ದರು.

ಇದೇ ವೇಳೆ ಬರಹಗಾರ ನಾ ಕಾರಂತ ಪೆರಾಜೆ ಅವರನ್ನು ಗೌರವಿಸಲಾಯಿತು.

ರೂರಲ್‌ ಮಿರರ್‌ ಪ್ರಕಾಶನದ ಮಹೇಶ ಪುಚ್ಚಪ್ಪಾಡಿ ಸ್ವಾಗತಿಸಿ ಪ್ರಸ್ತಾವನೆಗೈದು ವಂದಿಸಿದರು. ಕೃತಿಕಾಉದಯ್‌ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

4 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

9 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

9 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

19 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

19 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

19 hours ago