Advertisement
MIRROR FOCUS

ʼಮುಸ್ಸಂಜೆಯ ಹೊಂಗಿರಣ’ ಪುಸ್ತಕ ಬಿಡುಗಡೆ | ಸಂಕಷ್ಟದ ಸಮಯದಲ್ಲಿ ಗಾಂಧಿಯನ್ ಆರ್ಥಿಕತೆಯ ಪರಿಚಯ – ಅರವಿಂದ ಚೊಕ್ಕಾಡಿ

Share

ಸಮಾಜದಲ್ಲಿ ಸಂಕಷ್ಟದ ಸಮಯ ಬಂದಾಗ ಗಾಂಧಿಯನ್ ಆರ್ಥಿಕತೆ ಸಮಾಜವನ್ನು ರಕ್ಷಣೆ ಮಾಡುತ್ತದೆ. ಇದಕ್ಕೆ ಉದಾಹರಣೆ ಕೊರೋನಾ. ಕೊರೋನಾದ ಸಂಕಷ್ಟದ ಸಮಯದಲ್ಲಿ ಈ ಗಾಂಧಿಯನ್‌ ಆರ್ಥಿಕತೆ ಸಮುದಾಯಗಳನ್ನು ರಕ್ಷಿಸಿಕೊಳ್ಳುತ್ತಾ ಸಾಗಿದೆ. ಇದೆಲ್ಲಾ ಸಂಗತಿಗಳು ದಾಖಲು ರೂಪದಲ್ಲಿ ಮುಸ್ಸಂಜೆಯ ಹೊಂಗಿರಣದಲ್ಲಿ ಕಂಡುಬರುತ್ತದೆ ಎಂದು ಸಾಹಿತಿ, ಶಿಕ್ಷಕ ಅರವಿಂದ ಚೊಕ್ಕಾಡಿ ಹೇಳಿದರು.

ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆದ ನಾ. ಕಾರಂತ,ಪೆರಾಜೆ ಅವರ ‘ ಮುಸ್ಸಂಜೆಯ ಹೊಂಗಿರಣ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.ಈ ಪುಸ್ತಕದಲ್ಲಿ ಬರುವ ವ್ಯಕ್ತಿಗಳು ಗಾಂಧಿಯನ್ ಆರ್ಥಿಕತೆಯನ್ನು ಅಭ್ಯಾಸ ಮಾಡಿದ್ದರೆಂದು ಅಲ್ಲ. ಗಾಂಧಿ ಹೇಳುವ ಮೊದಲೂ ಇದೆಲ್ಲ ನಮ್ಮ ಸಮಾಜದಲ್ಲಿ ಇತ್ತು. ಆದರೆ ನಮ್ಮ ಸಮಾಜದಲ್ಲಿ ನಿಜವಾಗಿ ಏನಿದೆ ಎಂಬುದನ್ನು ಹುಡುಕಲು ಗಾಂಧಿಗೆ ಮಾತ್ರ ಗೊತ್ತಿತ್ತು. ತಾನು ಹುಡುಕಿದ್ದನ್ನು ವ್ಯವಸ್ಥಿತವಾಗಿ ಗಾಂಧೀಜಿ ಹೇಳಿದರು ಎಂದರು.ಗಾಂಧಿಯನ್ ಇಕಾನಮಿ ಎಂದರೆ ಏನು?,ಇದೇ. ಸ್ವಾವಲಂಬಿ ಆರ್ಥಿಕತೆಯೇ ಗಾಂಧಿ ಚಿಂತನೆಯ ಆರ್ಥಿಕತೆ, ಇದೆಲ್ಲಾ ಈ ಪುಸ್ತಕದಲ್ಲಿ ದಾಖಲಾಗಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣಾವಿನಯಚಂದ್ರ ಕಿಲಂಗೋಡಿ ಮಾತನಾಡಿ,ದೇಶದಲ್ಲಿ ನಿಜವಾದ ಸ್ವಂತಿಕೆ ಇರುವುದು ಹಳ್ಳಿಗಳಲ್ಲಿ.ಕೊರೋನಾದಂತಹ ಸಮಯದಲ್ಲೂ ಹಳ್ಳಿಗಳು ಸೋಲಲಿಲ್ಲ, ಗಟ್ಟಿಯಾಗಿ ಬೆಳೆದವು. ಸಮಾಜದಲ್ಲಿ ಇರುವ ಧನಾತ್ಮಕ ಸಂಗತಿಗಳು ಹೆಚ್ಚು ಚರ್ಚೆಯಾಗಬೇಕು ಎಂದರು.

 

ಬರಹಗಾರ ನಾ.ಕಾರಂತ ಪೆರಾಜೆ ಮಾತನಾಡಿ ಕೊರೋನಾವು ಸಮಾಜದಲ್ಲಿ ಒಮ್ಮೆಲ್ಲೇ ತಲ್ಲಣ ಮೂಡಿಸಿತು. ಇದೇ ಸಮಯದಲ್ಲಿ ಅನೇಕ ಧನಾತ್ಮಕವಾದ ಬದಲಾವಣೆಗಳು ಕಂಡವು. ಇದರ ದಾಖಲಾತಿ ಅತೀ ಅಗತ್ಯವಾಗಿತ್ತು ಎಂದು ಹೇಳಿದರು.

ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಪ್ರಮೋದ್‌ ಶುಭ ಹಾರೈಸಿದರು. ವೇದಿಕೆಯಲ್ಲಿ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೂಪಾ ಉಪಸ್ಥಿತರಿದ್ದರು.

ಇದೇ ವೇಳೆ ಬರಹಗಾರ ನಾ ಕಾರಂತ ಪೆರಾಜೆ ಅವರನ್ನು ಗೌರವಿಸಲಾಯಿತು.

ರೂರಲ್‌ ಮಿರರ್‌ ಪ್ರಕಾಶನದ ಮಹೇಶ ಪುಚ್ಚಪ್ಪಾಡಿ ಸ್ವಾಗತಿಸಿ ಪ್ರಸ್ತಾವನೆಗೈದು ವಂದಿಸಿದರು. ಕೃತಿಕಾಉದಯ್‌ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

11 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago