ಸಮಾಜದಲ್ಲಿ ಸಂಕಷ್ಟದ ಸಮಯ ಬಂದಾಗ ಗಾಂಧಿಯನ್ ಆರ್ಥಿಕತೆ ಸಮಾಜವನ್ನು ರಕ್ಷಣೆ ಮಾಡುತ್ತದೆ. ಇದಕ್ಕೆ ಉದಾಹರಣೆ ಕೊರೋನಾ. ಕೊರೋನಾದ ಸಂಕಷ್ಟದ ಸಮಯದಲ್ಲಿ ಈ ಗಾಂಧಿಯನ್ ಆರ್ಥಿಕತೆ ಸಮುದಾಯಗಳನ್ನು ರಕ್ಷಿಸಿಕೊಳ್ಳುತ್ತಾ ಸಾಗಿದೆ. ಇದೆಲ್ಲಾ ಸಂಗತಿಗಳು ದಾಖಲು ರೂಪದಲ್ಲಿ ಮುಸ್ಸಂಜೆಯ ಹೊಂಗಿರಣದಲ್ಲಿ ಕಂಡುಬರುತ್ತದೆ ಎಂದು ಸಾಹಿತಿ, ಶಿಕ್ಷಕ ಅರವಿಂದ ಚೊಕ್ಕಾಡಿ ಹೇಳಿದರು.
ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆದ ನಾ. ಕಾರಂತ,ಪೆರಾಜೆ ಅವರ ‘ ಮುಸ್ಸಂಜೆಯ ಹೊಂಗಿರಣ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.ಈ ಪುಸ್ತಕದಲ್ಲಿ ಬರುವ ವ್ಯಕ್ತಿಗಳು ಗಾಂಧಿಯನ್ ಆರ್ಥಿಕತೆಯನ್ನು ಅಭ್ಯಾಸ ಮಾಡಿದ್ದರೆಂದು ಅಲ್ಲ. ಗಾಂಧಿ ಹೇಳುವ ಮೊದಲೂ ಇದೆಲ್ಲ ನಮ್ಮ ಸಮಾಜದಲ್ಲಿ ಇತ್ತು. ಆದರೆ ನಮ್ಮ ಸಮಾಜದಲ್ಲಿ ನಿಜವಾಗಿ ಏನಿದೆ ಎಂಬುದನ್ನು ಹುಡುಕಲು ಗಾಂಧಿಗೆ ಮಾತ್ರ ಗೊತ್ತಿತ್ತು. ತಾನು ಹುಡುಕಿದ್ದನ್ನು ವ್ಯವಸ್ಥಿತವಾಗಿ ಗಾಂಧೀಜಿ ಹೇಳಿದರು ಎಂದರು.ಗಾಂಧಿಯನ್ ಇಕಾನಮಿ ಎಂದರೆ ಏನು?,ಇದೇ. ಸ್ವಾವಲಂಬಿ ಆರ್ಥಿಕತೆಯೇ ಗಾಂಧಿ ಚಿಂತನೆಯ ಆರ್ಥಿಕತೆ, ಇದೆಲ್ಲಾ ಈ ಪುಸ್ತಕದಲ್ಲಿ ದಾಖಲಾಗಿದೆ ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾವಿನಯಚಂದ್ರ ಕಿಲಂಗೋಡಿ ಮಾತನಾಡಿ,ದೇಶದಲ್ಲಿ ನಿಜವಾದ ಸ್ವಂತಿಕೆ ಇರುವುದು ಹಳ್ಳಿಗಳಲ್ಲಿ.ಕೊರೋನಾದಂತಹ ಸಮಯದಲ್ಲೂ ಹಳ್ಳಿಗಳು ಸೋಲಲಿಲ್ಲ, ಗಟ್ಟಿಯಾಗಿ ಬೆಳೆದವು. ಸಮಾಜದಲ್ಲಿ ಇರುವ ಧನಾತ್ಮಕ ಸಂಗತಿಗಳು ಹೆಚ್ಚು ಚರ್ಚೆಯಾಗಬೇಕು ಎಂದರು.
ಬರಹಗಾರ ನಾ.ಕಾರಂತ ಪೆರಾಜೆ ಮಾತನಾಡಿ ಕೊರೋನಾವು ಸಮಾಜದಲ್ಲಿ ಒಮ್ಮೆಲ್ಲೇ ತಲ್ಲಣ ಮೂಡಿಸಿತು. ಇದೇ ಸಮಯದಲ್ಲಿ ಅನೇಕ ಧನಾತ್ಮಕವಾದ ಬದಲಾವಣೆಗಳು ಕಂಡವು. ಇದರ ದಾಖಲಾತಿ ಅತೀ ಅಗತ್ಯವಾಗಿತ್ತು ಎಂದು ಹೇಳಿದರು.
ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಪ್ರಮೋದ್ ಶುಭ ಹಾರೈಸಿದರು. ವೇದಿಕೆಯಲ್ಲಿ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೂಪಾ ಉಪಸ್ಥಿತರಿದ್ದರು.
ಇದೇ ವೇಳೆ ಬರಹಗಾರ ನಾ ಕಾರಂತ ಪೆರಾಜೆ ಅವರನ್ನು ಗೌರವಿಸಲಾಯಿತು.
ರೂರಲ್ ಮಿರರ್ ಪ್ರಕಾಶನದ ಮಹೇಶ ಪುಚ್ಚಪ್ಪಾಡಿ ಸ್ವಾಗತಿಸಿ ಪ್ರಸ್ತಾವನೆಗೈದು ವಂದಿಸಿದರು. ಕೃತಿಕಾಉದಯ್ ಕಾರ್ಯಕ್ರಮ ನಿರ್ವಹಿಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…