Advertisement
MIRROR FOCUS

ನೀರಿನ ಅಭಾವಕ್ಕೆ ಸಾಸಿವೆ ಪರಿಹಾರ : ಕಂಪ್ಲಿ ರೈತರ ಪರ್ಯಾಯ ಕೃಷಿ ಯಶೋಗಾಥೆ

Share

ಕೃಷಿ ಚಟುವಟಿಕೆ ಬಹುತೇಕವಾಗಿ ನೀರಿನ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ನೀರಿನ ಅಭಾವದಂತಹ ಸಂಕಷ್ಟದ ಸಂದರ್ಭಗಳಲ್ಲಿ ಪರ್ಯಾಯ ಮಾರ್ಗಗಳನ್ನು ಹುಡುಕುವುದು ರೈತರಿಗೆ ಅವಶ್ಯಕವಾಗುತ್ತದೆ. ಇದೇ ದಿಸೆಯಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರೈತರು ಹೊಸ ಪ್ರಯೋಗಕ್ಕೆ ಮುಂದಾಗಿ ಸಾಸಿವೆ ಕೃಷಿಯತ್ತ ಮುಖ ಮಾಡಿದ್ದಾರೆ.

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ಗಳ ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎರಡನೇ ಬೆಳೆಗೆ ಅಗತ್ಯ ನೀರು ಲಭ್ಯವಾಗದೇ ರೈತರು ಸಂಕಷ್ಟ ಎದುರಿಸಿದ್ದಾರೆ. ಸಾಮಾನ್ಯವಾಗಿ ಸದಾ ಹಸಿರಿನಿಂದ ಕಂಗೊಳಿಸುವ ಭತ್ತದ ಗದ್ದೆಗಳು ಈ ಬಾರಿ ಪರ್ಯಾಯ ಬೆಳೆಯಾದ ಸಾಸಿವೆ ಹೂಗಳಿಂದ ಹಳದಿ ಬಣ್ಣದಲ್ಲಿ ಮಿಂಚುತ್ತಿವೆ.

ನೀರಿನ ಕೊರತೆಯ ನಡುವೆಯೂ ಕಡಿಮೆ ಪ್ರಮಾಣದ ನೀರಿನಲ್ಲಿ ಬೆಳೆಯಬಹುದಾದ ಸಾಸಿವೆ ರೈತರಿಗೆ ಆಶಾಕಿರಣವಾಗಿದೆ. ಎಕರೆವೊಂದಕ್ಕೆ ಸುಮಾರು ₹5 ಸಾವಿರ ವೆಚ್ಚದಲ್ಲಿ ಬೆಳೆ ಬೆಳೆಸಬಹುದಾಗಿದ್ದು, ₹15 ಸಾವಿರವರೆಗೆ ಲಾಭ ಗಳಿಸುವ ಸಾಧ್ಯತೆ ಇದೆ ಎಂದು ರೈತರು ಹೇಳುತ್ತಾರೆ. ಸ್ಥಳೀಯ ಮಾರುಕಟ್ಟೆಯಲ್ಲೂ ಸಾಸಿವೆ ಬೆಳೆಗೆ ಉತ್ತಮ ಬೇಡಿಕೆ ಇರುವುದರಿಂದ ರೈತರಿಗೆ ಆರ್ಥಿಕ ಭದ್ರತೆ ಒದಗಿಸುತ್ತಿದೆ. ಜೊತೆಗೆ ಸಾಸಿವೆ ಗಿಡಗಳು ಜಾನುವಾರುಗಳಿಗೆ ಉತ್ತಮ ಮೇವು ಕೂಡ ಆಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರ ಮಾತು

“ಈ ವರ್ಷ ಎರಡನೇ ಬೆಳೆಗೆ ನೀರಿನ ಸಮಸ್ಯೆ ಎದುರಾದ ಕಾರಣ ಪರ್ಯಾಯವಾಗಿ ಸಾಸಿವೆ ಕೃಷಿ ಕೈಗೊಂಡಿದ್ದೇವೆ. ಕಡಿಮೆ ಗೊಬ್ಬರ ಹಾಗೂ ಮಿತ ಪ್ರಮಾಣದ ಕೀಟನಾಶಕ ಸಾಕಾಗುತ್ತದೆ.” — ರೈತ ಚಂದ್ರಶೇಖರ ರೆಡ್ಡಿ

“ವರ್ಷದಲ್ಲಿ ಎರಡು ಬಾರಿ ಭತ್ತ ಬೆಳೆದರೆ ಮಣ್ಣಿನ ಫಲವತ್ತತೆ ಕುಸಿಯುತ್ತದೆ. ಸಾಸಿವೆಂತಹ ಪರ್ಯಾಯ ಬೆಳೆಗಳು ಮಣ್ಣಿನ ಆರೋಗ್ಯ ಕಾಪಾಡಲು ನೆರವಾಗುತ್ತವೆ.” — ರೈತ ರವಿಚಂದ್ರ

ಕೃಷಿ ಇಲಾಖೆ ಅಭಿಪ್ರಾಯ

“ಈ ಬಾರಿ ಕಂಪ್ಲಿ ತಾಲೂಕಿನಲ್ಲಿ ಸುಮಾರು 250 ರಿಂದ 350 ಹೆಕ್ಟೇರ್ ಪ್ರದೇಶದಲ್ಲಿ ಸಾಸಿವೆ ಬೆಳೆಯಲಾಗುತ್ತಿದೆ. ಮಳೆಯ ಕೊರತೆ ಹಾಗೂ ನೀರಿನ ಅಭಾವದ ಪರಿಸ್ಥಿತಿಯಲ್ಲಿಯೂ ಸಾಸಿವೆ ಉತ್ತಮ ಆದಾಯ ನೀಡಬಲ್ಲ ಬೆಳೆ.” — ಜ್ಯೋತಿ, ಪ್ರಭಾರಿ ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ

“ಸಾಸಿವೆ ಕೃಷಿಯಲ್ಲಿ ಕಡಿಮೆ ಖರ್ಚು ಮಾಡಿ ಹೆಚ್ಚಿನ ಆದಾಯ ಗಳಿಸಬಹುದು. ಎಣ್ಣೆ ಕಾಳುಗಳಿಗೆ ಹೆಚ್ಚುತ್ತಿರುವ ಬೇಡಿಕೆ ರೈತರಿಗೆ ಲಾಭದಾಯಕವಾಗಿದೆ.”
— ವಿದ್ಯಾವತಿ ಹೊಸಮನಿ, ಸಹಾಯಕ ಕೃಷಿ ನಿರ್ದೇಶಕಿ

ವಿಜ್ಞಾನಿಗಳ ಸಲಹೆ

“ಭತ್ತ ಕಟಾವು ಮಾಡುವ ಸುಮಾರು 10 ದಿನಗಳ ಮುಂಚಿತವಾಗಿ ಸಾಸಿವೆ ಬೀಜ ಬಿತ್ತನೆ ಮಾಡಿದರೆ ಭತ್ತದ ತೇವಾಂಶವೇ ಮೊಳಕೆಗೆ ಅನುಕೂಲಕರ ವಾತಾವರಣ ಒದಗಿಸುತ್ತದೆ.” — ಡಾ. ಮಲ್ಲೇಶ್, ವಿಜ್ಞಾನಿ, ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ

ಒಟ್ಟಿನಲ್ಲಿ ಕೃಷಿ ವಲಯದಲ್ಲಿ ಎದುರಾಗುವ ಸಂಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ, ವಿನೂತನ ಪ್ರಯತ್ನಗಳ ಮೂಲಕ ಪರ್ಯಾಯ ಬೆಳೆಗಳನ್ನು ಅಳವಡಿಸಿಕೊಳ್ಳುತ್ತಿರುವ ಅನ್ನದಾತರ ಈ ಪ್ರಯತ್ನ ಇತರ ರೈತರಿಗೆ ಸ್ಪೂರ್ತಿದಾಯಕವಾಗಿದೆ.

Due to water shortage caused by repair works at the Tungabhadra reservoir, farmers in Kampli taluk of Ballari district have shifted to mustard cultivation as an alternative second crop. Requiring less water and lower investment, mustard farming is helping farmers sustain income while improving soil health, making it a viable climate-resilient agricultural practice.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago