Advertisement
MIRROR FOCUS

ಮ್ಯಾನ್ಮಾರ್‌ ಅಡಿಕೆ ಕಳ್ಳಸಾಗಾಣಿಕೆ ನಿಯಂತ್ರಣ – ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ

Share

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಕಡಿಮೆಯಾಗಿರುವ ಕಾರಣದಿಂದ ಮಿಜೋರಾಂ ಅಡಿಕೆ ರೈತರಿಗೆ ಸದ್ಯ ಉತ್ತಮ ಧಾರಣೆ ಲಭ್ಯವಾಗುತ್ತಿದೆ. ಕಳ್ಳಸಾಗಾಣಿಕೆ ಕಡಿಮೆಯಾಗಿರುವ ಕಾರಣದಿಂದ  ರಾಜ್ಯದಲ್ಲೂ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ ಇದೆ.

ಈ ವರ್ಷದ ಆರಂಭದಿಂದಲೇ ಮಿಜೋರಾಂ ಜಿಲ್ಲೆಯಲ್ಲಿ  ಅಡಿಕೆ ಬೆಳೆಗಾರರು ಈ ವರ್ಷ ತಮ್ಮ ಉತ್ಪನ್ನಗಳಿಗೆ ಉತ್ತಮ ಬೆಲೆಯನ್ನು ಪಡೆದಿದ್ದಾರೆ.  ಈ ವರ್ಷ  ರೈತರು ಸುಮಾರು 50 ಕೋಟಿ ರೂ. ಮೌಲ್ಯದ ಅಡಿಕೆಯನ್ನು ಕೊಯ್ಲು ಮಾಡಿದ್ದಾರೆ,  ಹಿಂದಿನ ವರ್ಷಗಳಿಗೆ ಹೋಲಿಸಿದರೆ ಬೆಲೆಗಳೂ ಉತ್ತಮವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಮಿಜೋರಾಂನ ಹಚ್ಚೇಕ್ ಪ್ರದೇಶದ ಸುಮಾರು 32 ಹಳ್ಳಿಗಳಲ್ಲಿ ಸುಮಾರು 30 ಹಳ್ಳಿಗಳಲ್ಲಿ ಅಡಿಕೆ ಬೆಳೆಯುತ್ತವೆ.

ತ್ರಿಪುರ ಮತ್ತು ಬಾಂಗ್ಲಾದೇಶದ ಗಡಿಯಲ್ಲಿರುವ ಮಾಮಿತ್ ಜಿಲ್ಲೆಯ ಹಚೇಕ್ ಪ್ರದೇಶದ ಅಡಿಕೆ ಬೆಳೆಗಾರರ ಸಂಘದ  ಕಾರ್ಯದರ್ಶಿ ವಿಕ್ಟರ್ ಎಂ.ಎಸ್. ಡಾಂಗ್ಲಿಯಾನ ಅವರ ಪ್ರಕಾರ, ಈ ವರ್ಷ ಈ ಪ್ರದೇಶದ ರೈತರಿಗೆ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಉತ್ತಮ ಬೆಲೆಗಳು ಲಭ್ಯವಾಗಿದೆ. ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಕಡಿಮೆಯಾದ ಕಾರಣ ಸ್ಥಳೀಯವಾಗಿ ಉತ್ಪಾದಿಸುವ ಅಡಿಕೆ ಉತ್ತಮ ದರದಲ್ಲಿ ಮಾರಾಟ ಮಾಡಲು ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ.  ಅಡಿಕೆ ಕಳ್ಳಸಾಗಣೆ ವ್ಯಾಪಕವಾಗಿದ್ದ ಕಾಲದಲ್ಲಿ ಪ್ರತಿ ಚೀಲಕ್ಕೆ 1,200 ರಿಂದ 1,500 ರೂ.ವರೆಗೆ ಮಾರಾಟವಾಗುತ್ತಿದ್ದ ಅಡಿಕೆ ಈಗ ಪ್ರತಿ ಚೀಲಕ್ಕೆ 2,500 ರಿಂದ 3,000 ರೂ.ವರೆಗೆ ಮಾರಾಟವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಅಡಿಕೆ ಕಳ್ಳಸಾಗಾಣಿಕೆ ತಡೆಯಾದಂತೆಯೇ ರಾಜ್ಯದಲ್ಲೂ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಈ ಬಾರಿ ಅಡಿಕೆಯ ಕೊರತೆಯೂ ಇರುವುದರಿಂದ ಹೊಸ ಅಡಿಕೆ ಧಾರಣೆ ಕೂಡಾ ಏರಿಕೆ ಸಾಧ್ಯತೆ ಇದೆ. ಕಳೆದ ವರ್ಷ ಮಾರ್ಚ್‌ ಬಳಿಕ ಹೊಸ ಅಡಿಕೆ ಧಾರಣೆ 450 ರೂಪಾಯಿ ತಲುಪಿದ್ದರೆ, ಈ ಬಾರಿ ಜನವರಿ ಅಂತ್ಯ-ಫೆಬ್ರವರಿಯ ಹೊತ್ತಿಗೆ 450 ರೂಪಾಯಿ ತಲಪುವ ನಿರೀಕ್ಷೆ ಇದೆ. ಹಳೆ ಅಡಿಕೆ ಧಾರಣೆ ಈಗಾಗಲೇ 500 ರೂಪಾಯಿ ದಾಟಿರುವುದರಿಂದ ಮುಂದೆ ಗಣನೀಯವಾಗಿ ಧಾರಣೆ ಏರಿಕೆಯ ನಿರೀಕ್ಷೆಯನ್ನು ಬೆಳೆಗಾರರು ಇಲ್ಲಿ ಇರಿಸಿಕೊಳ್ಳಬೇಕಾಗಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago