MIRROR FOCUS

Arecanut Import | ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ ಇದು | ಸಿದ್ಧವಾಗುತ್ತಿದೆ ಮೂರು ವರ್ಷಗಳ ಯೋಜನೆ | ಮ್ಯಾನ್ಮಾರ್ ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್‌ ಅಡಿಕೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತಕ್ಕೆ ಮುಂದಿನ ಮೂರು ವರ್ಷಗಳ ಕಾಲ ಪ್ರತೀ ತಿಂಗಳು 200 ಟನ್‌ ಅಡಿಕೆ ಆಮದಾಗಲಿದೆ. ಈ ಬಗ್ಗೆ ಒಪ್ಪಂದವಾಗಿದೆ ಎಂದು ಮ್ಯಾನ್ಮಾರ್‌ ವರದಿಗಳು ತಿಳಿಸಿವೆ.

ಸುದ್ದಿ ಮೂಲಗಳ ಪ್ರಕಾರ, ಮ್ಯಾನ್ಮಾರ್ ಪ್ರತಿ ತಿಂಗಳು ಸರಿಸುಮಾರು 200 ಟನ್ ಅಡಿಕೆಯನ್ನು ಭಾರತಕ್ಕೆ ರಫ್ತು ಮಾಡಲು ಯೋಜಿಸಿದೆ. ಅಡಿಕೆ ಗುಣಮಟ್ಟಕ್ಕಾಗಿ ಅನುಮೋದನೆ ಪಡೆಯಲು 20 ಕಂಟೇನರ್‌ನಲ್ಲಿ ಮೊದಲ ಬ್ಯಾಚ್‌ನ 17 ಟನ್‌ಗಳಷ್ಟು ಒಣಗಿದ ಅಡಿಕೆಯನ್ನು ಭಾರತಕ್ಕೆ ಸಾಗಿಸಲು ಸಿದ್ಧತೆಗಳು ನಡೆಯುತ್ತಿವೆ.  ವರದಿಗಳ ಪ್ರಕಾರ ಭಾರತದ ಕಂಪನಿ ಮತ್ತು ಮ್ಯಾನ್ಮಾರ್‌ನ ಸ್ಥಳೀಯ ಅಡಿಕೆ ಬೆಳೆಗಾರರ ಸಂಘದ ಸದಸ್ಯರು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ.

ಭಾರತದ ಲ್ಯಾಕ್ಸ್ ಕಾರ್ಪೊರೇಷನ್ ಕಂ ಲಿಮಿಟೆಡ್(Lax ) ಮ್ಯಾನ್ಮಾರ್‌ನಿಂದ ಮಾಸಿಕ ಆಧಾರದ ಮೇಲೆ ಅಡಿಕೆಯನ್ನು ಖರೀದಿಸಲು ಆಸಕ್ತಿಯನ್ನು ವ್ಯಕ್ತಪಡಿಸಿದೆ. ಪಾವತಿ ವಿಧಾನಗಳು ಸೇರಿದಂತೆ ಆಮದು-ರಫ್ತಿನ ನಿಯಮಗಳು ಮತ್ತು ಷರತ್ತುಗಳಿಗೆ ಸಂಬಂಧಿಸಿದಂತೆ ಉಭಯ ದೇಶಗಳ ಪ್ರಮುಖರು ಪ್ರಸ್ತುತ ಚರ್ಚೆಯಲ್ಲಿ ತೊಡಗಿವೆ ಎಂದು ವರದಿಯಾಗಿದೆ.  ಜನವರಿಯಲ್ಲಿ, ಮ್ಯಾನ್ಮಾರ್ ಅಡಿಕೆ ಉದ್ಯಮಿಗಳ ಸಂಘವು ಒಣ ಅಡಿಕೆಯ ಮಾದರಿಯನ್ನು ಲ್ಯಾಕ್ಸ್ ಕಾರ್ಪೊರೇಷನ್ ಕಂ ಲಿಮಿಟೆಡ್ ಕಳುಹಿಸಿದೆ . ಮ್ಯಾನ್ಮಾರ್ ಸುಮಾರು 2,30,000 ಟನ್‌ಗಳಷ್ಟು ವಾರ್ಷಿಕವಾಗಿ ಅಡಿಕೆಯನ್ನು  ಉತ್ಪಾದನೆಯನ್ನು ಹೊಂದಿದೆ. ಈಗ ಮ್ಯಾನ್ಮಾರ್‌ ಬೇಡಿಕೆ ಪೂರೈಕೆಯ ಬಳಿಕ ಹೆಚ್ಚುವರಿ ಉತ್ಪಾದನೆಯನ್ನು ರಫ್ತು ಮಾಡುವ ಗುರಿಯನ್ನು  ಹೊಂದಿದೆ. ಈ ಹಿಂದೆ ಬಾಂಗ್ಲಾದೇಶಕ್ಕೂ ರಪ್ತು ಮಾಡಿತ್ತು. ಈಗ ಭಾರತದತ್ತ ಮುಖ ಮಾಡಿದೆ.

ಇದುವರೆಗೂ ಮ್ಯಾನ್ಮಾರ್‌ ಅಡಿಕೆಯು ಕಳ್ಳಸಾಗಾಣಿಕೆಯ ಮೂಲಕ ಭಾರತದೊಳಕ್ಕೆ ಬರುತ್ತಿತ್ತು. ಈಗ ಅಧಿಕೃತವಾಗಿ 200 ಮೆಟ್ರಿಕ್‌ ಟನ್‌ ಪ್ರತೀ ತಿಂಗಳು ಆಮದಾಗುವ ಯೋಜನೆ ಸಿದ್ಧವಾಗುತ್ತಿದೆ ಎನ್ನುವ ವರದಿ ಅಡಿಕೆ ಬೆಳೆಗಾರರು ಯೋಚಿಸಬೇಕಾದ ವಿಷಯವಾಗಿದೆ.

Myanmar Arecanut Entrepreneurs Association, has reported that Myanmar and India have initially agreed to export 200 tonnes of dried Arecanuts from Myanmar to India each month. This agreement will remain in effect for three years.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏಪ್ರಿಲ್‌ನಲ್ಲಿ ಶನಿ ನಕ್ಷತ್ರ ಪ್ರವೇಶದಿಂದ 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

13 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

13 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

1 day ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

1 day ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

1 day ago