MIRROR FOCUS

Arecanut Import | ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ ಇದು | ಸಿದ್ಧವಾಗುತ್ತಿದೆ ಮೂರು ವರ್ಷಗಳ ಯೋಜನೆ | ಮ್ಯಾನ್ಮಾರ್ ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್‌ ಅಡಿಕೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತಕ್ಕೆ ಮುಂದಿನ ಮೂರು ವರ್ಷಗಳ ಕಾಲ ಪ್ರತೀ ತಿಂಗಳು 200 ಟನ್‌ ಅಡಿಕೆ ಆಮದಾಗಲಿದೆ. ಈ ಬಗ್ಗೆ ಒಪ್ಪಂದವಾಗಿದೆ ಎಂದು ಮ್ಯಾನ್ಮಾರ್‌ ವರದಿಗಳು ತಿಳಿಸಿವೆ.

Advertisement

ಸುದ್ದಿ ಮೂಲಗಳ ಪ್ರಕಾರ, ಮ್ಯಾನ್ಮಾರ್ ಪ್ರತಿ ತಿಂಗಳು ಸರಿಸುಮಾರು 200 ಟನ್ ಅಡಿಕೆಯನ್ನು ಭಾರತಕ್ಕೆ ರಫ್ತು ಮಾಡಲು ಯೋಜಿಸಿದೆ. ಅಡಿಕೆ ಗುಣಮಟ್ಟಕ್ಕಾಗಿ ಅನುಮೋದನೆ ಪಡೆಯಲು 20 ಕಂಟೇನರ್‌ನಲ್ಲಿ ಮೊದಲ ಬ್ಯಾಚ್‌ನ 17 ಟನ್‌ಗಳಷ್ಟು ಒಣಗಿದ ಅಡಿಕೆಯನ್ನು ಭಾರತಕ್ಕೆ ಸಾಗಿಸಲು ಸಿದ್ಧತೆಗಳು ನಡೆಯುತ್ತಿವೆ.  ವರದಿಗಳ ಪ್ರಕಾರ ಭಾರತದ ಕಂಪನಿ ಮತ್ತು ಮ್ಯಾನ್ಮಾರ್‌ನ ಸ್ಥಳೀಯ ಅಡಿಕೆ ಬೆಳೆಗಾರರ ಸಂಘದ ಸದಸ್ಯರು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ.

ಭಾರತದ ಲ್ಯಾಕ್ಸ್ ಕಾರ್ಪೊರೇಷನ್ ಕಂ ಲಿಮಿಟೆಡ್(Lax ) ಮ್ಯಾನ್ಮಾರ್‌ನಿಂದ ಮಾಸಿಕ ಆಧಾರದ ಮೇಲೆ ಅಡಿಕೆಯನ್ನು ಖರೀದಿಸಲು ಆಸಕ್ತಿಯನ್ನು ವ್ಯಕ್ತಪಡಿಸಿದೆ. ಪಾವತಿ ವಿಧಾನಗಳು ಸೇರಿದಂತೆ ಆಮದು-ರಫ್ತಿನ ನಿಯಮಗಳು ಮತ್ತು ಷರತ್ತುಗಳಿಗೆ ಸಂಬಂಧಿಸಿದಂತೆ ಉಭಯ ದೇಶಗಳ ಪ್ರಮುಖರು ಪ್ರಸ್ತುತ ಚರ್ಚೆಯಲ್ಲಿ ತೊಡಗಿವೆ ಎಂದು ವರದಿಯಾಗಿದೆ.  ಜನವರಿಯಲ್ಲಿ, ಮ್ಯಾನ್ಮಾರ್ ಅಡಿಕೆ ಉದ್ಯಮಿಗಳ ಸಂಘವು ಒಣ ಅಡಿಕೆಯ ಮಾದರಿಯನ್ನು ಲ್ಯಾಕ್ಸ್ ಕಾರ್ಪೊರೇಷನ್ ಕಂ ಲಿಮಿಟೆಡ್ ಕಳುಹಿಸಿದೆ . ಮ್ಯಾನ್ಮಾರ್ ಸುಮಾರು 2,30,000 ಟನ್‌ಗಳಷ್ಟು ವಾರ್ಷಿಕವಾಗಿ ಅಡಿಕೆಯನ್ನು  ಉತ್ಪಾದನೆಯನ್ನು ಹೊಂದಿದೆ. ಈಗ ಮ್ಯಾನ್ಮಾರ್‌ ಬೇಡಿಕೆ ಪೂರೈಕೆಯ ಬಳಿಕ ಹೆಚ್ಚುವರಿ ಉತ್ಪಾದನೆಯನ್ನು ರಫ್ತು ಮಾಡುವ ಗುರಿಯನ್ನು  ಹೊಂದಿದೆ. ಈ ಹಿಂದೆ ಬಾಂಗ್ಲಾದೇಶಕ್ಕೂ ರಪ್ತು ಮಾಡಿತ್ತು. ಈಗ ಭಾರತದತ್ತ ಮುಖ ಮಾಡಿದೆ.

ಇದುವರೆಗೂ ಮ್ಯಾನ್ಮಾರ್‌ ಅಡಿಕೆಯು ಕಳ್ಳಸಾಗಾಣಿಕೆಯ ಮೂಲಕ ಭಾರತದೊಳಕ್ಕೆ ಬರುತ್ತಿತ್ತು. ಈಗ ಅಧಿಕೃತವಾಗಿ 200 ಮೆಟ್ರಿಕ್‌ ಟನ್‌ ಪ್ರತೀ ತಿಂಗಳು ಆಮದಾಗುವ ಯೋಜನೆ ಸಿದ್ಧವಾಗುತ್ತಿದೆ ಎನ್ನುವ ವರದಿ ಅಡಿಕೆ ಬೆಳೆಗಾರರು ಯೋಚಿಸಬೇಕಾದ ವಿಷಯವಾಗಿದೆ.

Myanmar Arecanut Entrepreneurs Association, has reported that Myanmar and India have initially agreed to export 200 tonnes of dried Arecanuts from Myanmar to India each month. This agreement will remain in effect for three years.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

14 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

14 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

14 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

23 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

1 day ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

1 day ago