Advertisement
MIRROR FOCUS

Arecanut Import | ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ ಇದು | ಸಿದ್ಧವಾಗುತ್ತಿದೆ ಮೂರು ವರ್ಷಗಳ ಯೋಜನೆ | ಮ್ಯಾನ್ಮಾರ್ ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್‌ ಅಡಿಕೆ…! |

Share

ಭಾರತಕ್ಕೆ ಮುಂದಿನ ಮೂರು ವರ್ಷಗಳ ಕಾಲ ಪ್ರತೀ ತಿಂಗಳು 200 ಟನ್‌ ಅಡಿಕೆ ಆಮದಾಗಲಿದೆ. ಈ ಬಗ್ಗೆ ಒಪ್ಪಂದವಾಗಿದೆ ಎಂದು ಮ್ಯಾನ್ಮಾರ್‌ ವರದಿಗಳು ತಿಳಿಸಿವೆ.

Advertisement
Advertisement

ಸುದ್ದಿ ಮೂಲಗಳ ಪ್ರಕಾರ, ಮ್ಯಾನ್ಮಾರ್ ಪ್ರತಿ ತಿಂಗಳು ಸರಿಸುಮಾರು 200 ಟನ್ ಅಡಿಕೆಯನ್ನು ಭಾರತಕ್ಕೆ ರಫ್ತು ಮಾಡಲು ಯೋಜಿಸಿದೆ. ಅಡಿಕೆ ಗುಣಮಟ್ಟಕ್ಕಾಗಿ ಅನುಮೋದನೆ ಪಡೆಯಲು 20 ಕಂಟೇನರ್‌ನಲ್ಲಿ ಮೊದಲ ಬ್ಯಾಚ್‌ನ 17 ಟನ್‌ಗಳಷ್ಟು ಒಣಗಿದ ಅಡಿಕೆಯನ್ನು ಭಾರತಕ್ಕೆ ಸಾಗಿಸಲು ಸಿದ್ಧತೆಗಳು ನಡೆಯುತ್ತಿವೆ.  ವರದಿಗಳ ಪ್ರಕಾರ ಭಾರತದ ಕಂಪನಿ ಮತ್ತು ಮ್ಯಾನ್ಮಾರ್‌ನ ಸ್ಥಳೀಯ ಅಡಿಕೆ ಬೆಳೆಗಾರರ ಸಂಘದ ಸದಸ್ಯರು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ.

ಭಾರತದ ಲ್ಯಾಕ್ಸ್ ಕಾರ್ಪೊರೇಷನ್ ಕಂ ಲಿಮಿಟೆಡ್(Lax ) ಮ್ಯಾನ್ಮಾರ್‌ನಿಂದ ಮಾಸಿಕ ಆಧಾರದ ಮೇಲೆ ಅಡಿಕೆಯನ್ನು ಖರೀದಿಸಲು ಆಸಕ್ತಿಯನ್ನು ವ್ಯಕ್ತಪಡಿಸಿದೆ. ಪಾವತಿ ವಿಧಾನಗಳು ಸೇರಿದಂತೆ ಆಮದು-ರಫ್ತಿನ ನಿಯಮಗಳು ಮತ್ತು ಷರತ್ತುಗಳಿಗೆ ಸಂಬಂಧಿಸಿದಂತೆ ಉಭಯ ದೇಶಗಳ ಪ್ರಮುಖರು ಪ್ರಸ್ತುತ ಚರ್ಚೆಯಲ್ಲಿ ತೊಡಗಿವೆ ಎಂದು ವರದಿಯಾಗಿದೆ.  ಜನವರಿಯಲ್ಲಿ, ಮ್ಯಾನ್ಮಾರ್ ಅಡಿಕೆ ಉದ್ಯಮಿಗಳ ಸಂಘವು ಒಣ ಅಡಿಕೆಯ ಮಾದರಿಯನ್ನು ಲ್ಯಾಕ್ಸ್ ಕಾರ್ಪೊರೇಷನ್ ಕಂ ಲಿಮಿಟೆಡ್ ಕಳುಹಿಸಿದೆ . ಮ್ಯಾನ್ಮಾರ್ ಸುಮಾರು 2,30,000 ಟನ್‌ಗಳಷ್ಟು ವಾರ್ಷಿಕವಾಗಿ ಅಡಿಕೆಯನ್ನು  ಉತ್ಪಾದನೆಯನ್ನು ಹೊಂದಿದೆ. ಈಗ ಮ್ಯಾನ್ಮಾರ್‌ ಬೇಡಿಕೆ ಪೂರೈಕೆಯ ಬಳಿಕ ಹೆಚ್ಚುವರಿ ಉತ್ಪಾದನೆಯನ್ನು ರಫ್ತು ಮಾಡುವ ಗುರಿಯನ್ನು  ಹೊಂದಿದೆ. ಈ ಹಿಂದೆ ಬಾಂಗ್ಲಾದೇಶಕ್ಕೂ ರಪ್ತು ಮಾಡಿತ್ತು. ಈಗ ಭಾರತದತ್ತ ಮುಖ ಮಾಡಿದೆ.

ಇದುವರೆಗೂ ಮ್ಯಾನ್ಮಾರ್‌ ಅಡಿಕೆಯು ಕಳ್ಳಸಾಗಾಣಿಕೆಯ ಮೂಲಕ ಭಾರತದೊಳಕ್ಕೆ ಬರುತ್ತಿತ್ತು. ಈಗ ಅಧಿಕೃತವಾಗಿ 200 ಮೆಟ್ರಿಕ್‌ ಟನ್‌ ಪ್ರತೀ ತಿಂಗಳು ಆಮದಾಗುವ ಯೋಜನೆ ಸಿದ್ಧವಾಗುತ್ತಿದೆ ಎನ್ನುವ ವರದಿ ಅಡಿಕೆ ಬೆಳೆಗಾರರು ಯೋಚಿಸಬೇಕಾದ ವಿಷಯವಾಗಿದೆ.

Myanmar Arecanut Entrepreneurs Association, has reported that Myanmar and India have initially agreed to export 200 tonnes of dried Arecanuts from Myanmar to India each month. This agreement will remain in effect for three years.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

18 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

18 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago