ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತವಾದ ನಾಡಹಬ್ಬ ಮೈಸೂರು ದಸರಾ(Mysore Dasara) ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
ದಸರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಮೈಸೂರು ದಸರಾ ಭಾರತದ ಸಂಸ್ಕೃತಿಯ ಪ್ರತೀಕವಾಗಿದೆ. ದಸರಾ ಹಬ್ಬವು ಹಲವು ಸಂಸ್ಕೃತಿಯ ಜೊತೆಗೆ ಬೆಸದುಕೊಂಡಿದೆ. ಬಸವಣ್ಣ, ಅಲ್ಲಮಪ್ರಭು ಆದರ್ಶ ವ್ಯಕ್ತಿಗಳಾಗಿದ್ದು. ಬಸವಣ್ಣನವರ ವಚನಗಳು ಜನತಂತ್ರಕ್ಕೆ ಮಾದರಿಯಾಗಿವೆ. ಈಗಲೂ ಬಸವಣ್ಣನವರ ವಚನಗಳನ್ನು ಭಕ್ತಿಪೂರ್ವಕವಾಗಿ ಕೇಳಲಾಗುತ್ತದೆ ಎಂದರು.
ಬೆಳಿಗ್ಗೆ 9.45ರಿಂದ 10.05ರ ವೃಶ್ಚಿಕ ಲಗ್ನದಲ್ಲಿ ಆರಂಭವಾದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ಲಭಿಸಿತು.
ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ , ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೊದಲಾದವರಿದ್ದರು.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…