ದಸರಾ ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ | ಮಹಿಳೆಯರಲ್ಲಿ ಆತ್ಮಶಕ್ತಿ ಜಾಗೃತಗೊಳಿಸೋಣ | ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ|

September 26, 2022
1:09 PM

ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ. ಈ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆತ್ಮಶಕ್ತಿ ತುಂಬುವ ಕಾರ್ಯ ಮಾಡೋಣ” ಎಂದು ಕರೆ ನೀಡಿದರು.

ತಾಯಿ ಚಾಮುಂಡೇಶ್ವರಿಗೆ ಮಂಗಳಾರತಿ ಮಾಡಿ, ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕವು ಮಹಿಳಾ ಸಮಾನತೆಗೂ ಹೆಸರುವಾಸಿ. ಇಲ್ಲಿ ದೇವಿಯ ಆರಾಧನೆಗೂ ಹೆಚ್ಚಿನ ಮಹತ್ವ ಇದೆ. ದೇವಿಯು ಶಕ್ತಿಸ್ವರೂಪಳೂ ಹೌದು, ತಾಯಿಯಾಗಿ ಭಕ್ತರನ್ನು ಕಾಪಾಡುವ ತಾಯಿ ಸ್ವರೂಪಳೂ ಹೌದು. ಹೀಗಾಗಿ ದಸರಾ ಸಮಯದಲ್ಲಿ ಮಹಿಳಾ ಶಕ್ತಿಯ ಉದ್ದೀಪನವಾಗಲಿ. ಮಹಿಳೆಯರು ಹಲವು ಆಯಾಮಗಳಲ್ಲಿ ಈಗ ಪ್ರಗತಿ ತೋರುತ್ತಿದ್ದಾರೆ. ಅವರಿಗೆ ನಾವು ಇನ್ನಷ್ಟು ಬಲ ತುಂಬಬೇಕಿದೆ ಎಂದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?
August 3, 2026
3:37 PM
by: ಮಹೇಶ್ ಪುಚ್ಚಪ್ಪಾಡಿ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror