ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ. ಈ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆತ್ಮಶಕ್ತಿ ತುಂಬುವ ಕಾರ್ಯ ಮಾಡೋಣ” ಎಂದು ಕರೆ ನೀಡಿದರು.
ತಾಯಿ ಚಾಮುಂಡೇಶ್ವರಿಗೆ ಮಂಗಳಾರತಿ ಮಾಡಿ, ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕವು ಮಹಿಳಾ ಸಮಾನತೆಗೂ ಹೆಸರುವಾಸಿ. ಇಲ್ಲಿ ದೇವಿಯ ಆರಾಧನೆಗೂ ಹೆಚ್ಚಿನ ಮಹತ್ವ ಇದೆ. ದೇವಿಯು ಶಕ್ತಿಸ್ವರೂಪಳೂ ಹೌದು, ತಾಯಿಯಾಗಿ ಭಕ್ತರನ್ನು ಕಾಪಾಡುವ ತಾಯಿ ಸ್ವರೂಪಳೂ ಹೌದು. ಹೀಗಾಗಿ ದಸರಾ ಸಮಯದಲ್ಲಿ ಮಹಿಳಾ ಶಕ್ತಿಯ ಉದ್ದೀಪನವಾಗಲಿ. ಮಹಿಳೆಯರು ಹಲವು ಆಯಾಮಗಳಲ್ಲಿ ಈಗ ಪ್ರಗತಿ ತೋರುತ್ತಿದ್ದಾರೆ. ಅವರಿಗೆ ನಾವು ಇನ್ನಷ್ಟು ಬಲ ತುಂಬಬೇಕಿದೆ ಎಂದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…