ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ. ಈ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ಆತ್ಮಶಕ್ತಿ ತುಂಬುವ ಕಾರ್ಯ ಮಾಡೋಣ” ಎಂದು ಕರೆ ನೀಡಿದರು.
ತಾಯಿ ಚಾಮುಂಡೇಶ್ವರಿಗೆ ಮಂಗಳಾರತಿ ಮಾಡಿ, ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ದಸರಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕವು ಮಹಿಳಾ ಸಮಾನತೆಗೂ ಹೆಸರುವಾಸಿ. ಇಲ್ಲಿ ದೇವಿಯ ಆರಾಧನೆಗೂ ಹೆಚ್ಚಿನ ಮಹತ್ವ ಇದೆ. ದೇವಿಯು ಶಕ್ತಿಸ್ವರೂಪಳೂ ಹೌದು, ತಾಯಿಯಾಗಿ ಭಕ್ತರನ್ನು ಕಾಪಾಡುವ ತಾಯಿ ಸ್ವರೂಪಳೂ ಹೌದು. ಹೀಗಾಗಿ ದಸರಾ ಸಮಯದಲ್ಲಿ ಮಹಿಳಾ ಶಕ್ತಿಯ ಉದ್ದೀಪನವಾಗಲಿ. ಮಹಿಳೆಯರು ಹಲವು ಆಯಾಮಗಳಲ್ಲಿ ಈಗ ಪ್ರಗತಿ ತೋರುತ್ತಿದ್ದಾರೆ. ಅವರಿಗೆ ನಾವು ಇನ್ನಷ್ಟು ಬಲ ತುಂಬಬೇಕಿದೆ ಎಂದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…