Advertisement
ಸುದ್ದಿಗಳು

14 ಬಾರಿ ಅಂಬಾರಿ ಹೊತ್ತಿದ್ದ ದಸರಾ ಆನೆ ಬಲರಾಮ ಅಸ್ವಸ್ಥ

Share

ದಸರಾ ಅಂದರೆ ಥಟ್ಟನೆ ನೆನಪಾಗುವುದು ವಿಶ್ವವಿಖ್ಯಾತ ಜಂಬೂಸವಾರಿಯ ಗಜಪಡೆ. ನಾಡ‌ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಸಾಗುವ ಗಜಪಡೆಯ ಗಜಗಾಂಭೀರ್ಯ ನಡಿಗೆಯನ್ನು ಕಣ್ಣು ತುಂಬಿಕೊಳ್ಳುವುದೇ ರೋಚಕ. ಈ ಮಹತ್ತರ ಜವಾಬ್ದಾರಿಯನ್ನು ಹಲವು ಆನೆಗಳು ಯಶಸ್ವಿಯಾಗಿ ನಿರ್ವಹಿಸಿವೆ. ಅದರಲ್ಲಿ ಪ್ರಮುಖವಾದ ಆನೆ ಬಲರಾಮ. ಸೌಮ್ಯ ಸ್ವಭಾವದ ಬಲರಾಮ ಆನೆ ಒಂದಲ್ಲ ಎರಡಲ್ಲ ಬರೋಬ್ಬರಿ 14 ಬಾರಿ ಅಂಬಾರಿ ಹೊತ್ತಿದ್ದಾನೆ. ದಸರಾದ ಅತ್ಯಂತ ಯಶಸ್ವಿಯಾಗಿ ಜಂಬೂಸವಾರಿ ಜವಾಬ್ದಾರಿ ನಿರ್ವಹಿಸಿದ ಬಲರಾಮ ಈಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ.

ಬಲರಾಮನಿಗೆ ಚಿಕಿತ್ಸೆ ನೀಡುತ್ತಿರುವ ಪಶು ವೈದ್ಯರ ತಂಡ

ಬಲರಾಮ ತೀವ್ರ ಅಸ್ವಸ್ಥಗೊಂಡಿದ್ದಾನೆ. 67 ವರ್ಷದ ಬಲರಾಮನಿಗೆ ವಯೋಸಹಜ ಆರೋಗ್ಯ ಸಮಸ್ಯೆ ಕಾಡುತ್ತಿದೆ. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿದೆ. ಬಲರಾಮನಿಗೆ ಕಳೆದ ಹತ್ತು ದಿನಗಳಿಂದ ಬಾಯಲ್ಲಿ ಹುಣ್ಣಾಗಿದೆ. ಇದರಿಂದ ಆಹಾರ ಸೇವಿಸಲು ಸಾಧ್ಯವಾಗದೆ ನಿತ್ರಾಣಗೊಂಡಿದ್ದಾನೆ. ಇದು ಟಿಬಿ(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದಾರೆ. ಇದಕ್ಕೆ ಬೇಕಾದ ಅಗತ್ಯ ಪರೀಕ್ಷೆ ನಡೆಸಲಾಗಿದೆ. ಪರೀಕ್ಷಾ ವರದಿ ಬಂದ ನಂತರವಷ್ಟೆ ಇದರ ಕುರಿತು ನಿಖರವಾಗಿ ತಿಳಿಯಲಿದೆ.

ಸ್ಥಳದಲ್ಲೇ ಬೀಡು ಬಿಟ್ಟಿರುವ ತಜ್ಞರು

ಬಲರಾಮನಿಗೆ ಆಹಾರ ಸೇವಿಸಲು ಮಾತ್ರವಲ್ಲ ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದೆ. ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ, ಬಲರಾಮನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ನಾಗರಹೊಳೆ ಅಭಯಾರಣ್ಯದ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್‌ಎಫ್‌ಓ ರತ್ನಾಕರ್, ಡಿಆರ್‌ಎಫ್‌ಓ ಸಿದ್ದರಾಜು ನೇತೃತ್ವದ ತಂಡ ಜೊತೆಗೆ ಬಲರಾಮನ ಮಾವುತ ತಿಮ್ಮ, ಕಾವಾಡಿ ಮಂಜನಾಥ, ಇನ್ನಿತರ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಅಸ್ವಸ್ಥಗೊಂಡಿರುವ ಬಲರಾಮನ ಆರೈಕೆಯನ್ನು ನೋಡಿಕೊಳ್ಳುತ್ತಿದ್ದಾರೆ.

ಎಂಡೋಸ್ಕೋಪಿ ವರದಿ

ತೀವ್ರ ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಪಶು ವೈದ್ಯ ಡಾ.ಚೆಟ್ಟಿಯಪ್ಪ, ಡಾ.ಮದನ್, ಡಾ.ರಮೇಶ್ ತಂಡ ಬಲರಾಮನನ್ನು ವಿವಿಧ ಪರೀಕ್ಷೆಗೆ ವಳಪಡಿಸಿದ್ದಾರೆ. ಮೈಸೂರು ಅರಮನೆ ರಾಜ ಕುಟುಂಬದ ನೆರವಿನಿಂದ ಪೋರ್ಟಬಲ್ ಯಂತ್ರದ ಮೂಲಕ ಎಂಡೋಸ್ಕೋಪಿ ಸಹ ಮಾಡಲಾಗಿದೆ. ಇದೆ ವರದಿಗಾಗಿ ಕಾಯಲಾಗುತ್ತಿದ್ದು, ಇದರ ವರದಿ ಬಂದ ನಂತರ ಬಲರಾಮನಿಗೆ ಸೂಕ್ತ ಚಿಕಿತ್ಸೆ ನೀಡಬಹುದಾಗಿದೆ.

ರಾಗಿ ಗಂಜಿ, ಬಾಳೆ ಹಣ್ಣು

ಬಲರಾಮ ಕಳೆದ ಹತ್ತು ದಿನಗಳಿಂದ ತೀವ್ರ ಅಸ್ವಸ್ಥಗೊಂಡಿರುವ ಬಲರಾಮನಿಗೆ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಗಟ್ಟಿ ಆಹಾರ ಸೇವಿಸಲಾಗದ ಬಲರಾಮನಿಗೆ ರಾಗಿ ಗಂಜಿ, ರಾಗಿ ಹಿಟ್ಟು, ಬಾಳೆ ಹಣ್ಣು, ಕಲ್ಲಂಗಡಿ ಹಣ್ಣಿನಂತಹ ಮೆದು ಆಹಾರ ನೀಡಲಾಗುತ್ತಿದೆ.

ಹಾರೈಕೆಗಳ ಮಹಾಪೂರ

ಮೈಸೂರು ದಸರೆಯ ಅಸ್ಮಿತೆ. ಎಲ್ಲರ ಪ್ರೀತಿ ಪಾತ್ರ ಬಲರಾಮ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅನ್ನೋದು ಎಲ್ಲರ ಆಶಯವಾಗಿದೆ. ಮೈಸೂರು ಮಾತ್ರವಲ್ಲ ಜಗತ್ತಿನ ಹಲವರು ಬಲರಾಮನ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ನಮ್ಮೆಲ್ಲರ ನೆಚ್ಚಿನ ಹೆಮ್ಮೆಯ ಬಲರಾಮ ಆದಷ್ಟು ಬೇಗ ಗುಣಮುಖವಾಗಲಿ ಅನ್ನೋದೆ ನಮ್ಮ ಹಾರೈಕೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

5 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

6 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

17 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

17 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

24 hours ago