Advertisement
MIRROR FOCUS

4 ದಶಕಗಳಲ್ಲೇ ಬರೋಬ್ಬರಿ 1500 ಕೋಟಿ ವಹಿವಾಟು | ಮೈಸೂರು ಸ್ಯಾಂಡಲ್ ಸೋಪ್ ಉತ್ಪಾದಕ ಸಂಸ್ಧೆ KSDLನಿಂದ ಮಹತ್ತರ ಸಾಧನೆ |

Share

ಸೋಪ್‌(Soap) ಅಂದ್ರೆ ಅದು ಮೈಸೂರು ಸ್ಯಾಂಡಲ್‌ ಸೋಪು(Mysore sandal soap). ದಿಕಳೆದಂತೆ ಮಾರುಕಟ್ಟೆಗೆ ಹೊಸ ಹೊಸ ನಮೂನೆ ಪರಿಮಳ ಬೀರುವ ಸಾಬೂನುಗಳು ಲಗ್ಗೆ ಇಟ್ಟವೂ. ಆಗ ನಮ್ಮ ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಟಂಲ್‌ ಸೋಪ್‌ ಬದಿಗೆ ಸರಿಯಿತು. ಆದರೆ ಸರ್ಕಾರ(Govt) ಹಾಗೂ ಆಡಳಿತ ಮಂಡಳಿ ಇತರ ಸಾಬೂನುಗಳೊಂದಿಗೆ ಮಾರುಕಟ್ಟೆಯಲ್ಲಿ(Market) ನಿಲ್ಲಲ್ಲು ಅವಿರತ ಪ್ರಯತ್ನವನ್ನು ಮಾಡಿದ ಫಲವಾಗಿ ಇಂದು ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸೋಪ್​ ಉತ್ಪಾದಕ ಸಂಸ್ಥೆ KSDL ಮತ್ತೊಂದು ಮಹತ್ತರ ಸಾಧನೆ ಮಾಡಿದೆ. ಇದೇ ಮಾರ್ಚ್ 31ಕ್ಕೆ ಅಂತ್ಯಗೊಳ್ಳುವಂತೆ 4 ದಶಕಗಳಲ್ಲೇ ಅತ್ಯಧಿಕ ಎನಿಸುವ ರೂ. 1,500 ಕೋಟಿ ವಹಿವಾಟು(Business) ನಡೆಸಿ ಹೊಸ ಇತಿಹಾಸ ಸೃಷ್ಟಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸಂತಸ ವ್ಯಕ್ತಪಡಿಸಿದ  ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್, ಇದೇ ವೇಳೆ “ರಾಜ್ಯದ ಉದ್ಯಮಗಳನ್ನು ಉಳಿಸಿ, ಬೆಳೆಸುವಲ್ಲಿ ನಮ್ಮ ಸರ್ಕಾರ ಬದ್ಧತೆಯನ್ನು ಪ್ರದರ್ಶಿಸುತ್ತಿದೆ ಮತ್ತು ಈ ಅಭಿವೃದ್ಧಿಯ ಪರ್ವ ಮುಂದುವರೆಯಲಿದೆ” ಎಂದಿದ್ದಾರೆ. ಪಾರಂಪರಿಕ ಹೆಗ್ಗುರುತಾಗಿರುವ ಮೈಸೂರು ಸ್ಯಾಂಡಲ್ ಸೋಪ್​ಗೆ ವಿಶ್ವದಾದ್ಯಂತ ಗ್ರಾಹಕರಿದ್ದಾರೆ. ಸರ್ಕಾರದ ಅಧೀನ ಸಂಸ್ಥೆಯಾದ ಕರ್ನಾಟಕ ಸೋಪ್ಸ್ ಆ್ಯಂಡ್​ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್)ನಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಾಗುತ್ತಿದೆ. ಮೈಸೂರು ಸ್ಯಾಂಡಲ್ ಸೋಪ್ ಕರ್ನಾಟಕ ರಾಜ್ಯದ ಹೆಮ್ಮೆಯ ಉತ್ಪನ್ನವಾಗಿದೆ. ಸರ್ಕಾರದ ಸಂಸ್ಥೆಯಾಗಿ ಲಾಭ ಗಳಿಕೆ ಮಾಡುತ್ತಿರುವುದು ಕನ್ನಡಿಗರಾದ ನಾವು ಹೆಮ್ಮೆ ಪಡುವ ವಿಷಯವಾಗಿದೆ ಎಂದು ಮಧ್ಯಮ ಕೈಗಾರಿಕೆಗಳ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೈಸೂರು ಸ್ಯಾಂಡಲ್ ಸೋಪ್ ಕಳೆದ 40 ವರ್ಷಗಳಲ್ಲಿ ಗರಿಷ್ಠ ಮಾರಾಟ ವಹಿವಾಟು ದಾಖಲಿಸಿದೆ. ಮಾರ್ಚ್ 2024ರ ವೇಳೆಗೆ 1,500 ಕೋಟಿ ರೂ.ಗಳನ್ನು ಮೀರಿ ವಹಿವಾಟು ನಡೆಸಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಾರಾಟದಲ್ಲಿ 195 ಕೋಟಿ ರೂಪಾಯಿ ಏರಿಕೆಯಾಗಿದ್ದು, ಇದು ಶೇಕಡಾ 14.25 ರಷ್ಟು ಬೆಳವಣಿಗೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕೆಎಸ್‌ಡಿಎಲ್ ಸಂಸ್ಥೆ ಶವರ್ ಜೆಲ್‌ಗಳು, ಮೈಸೂರು ಸ್ಯಾಂಡಲ್ ವೇವ್ ಡಿಯೋ ಸೋಪ್, ಗ್ಲಿಸರಿನ್ ಆಧಾರಿತ ಪಾರದರ್ಶಕ ಸ್ನಾನದ ಬಾರ್ ಮತ್ತು ಸೂಪರ್ ಪ್ರೀಮಿಯಂ ಬಾತ್ ಸೋಪ್ ಸೇರಿದಂತೆ 21 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಉತ್ಪನ್ನಗಳಲ್ಲಿ ಮೈಸೂರು ಸ್ಯಾಂಡಲ್ ಮಿಲೇನಿಯಂ ಗೋಲ್ಡ್ ವಿಶೇಷತೆ ಹೊಂದಿದ್ದು, 100 ಗ್ರಾಂ ಸೋಪಿನ ಬೆಲೆ 1,000 ರೂಪಾಯಿ ಇದೆ. ಮೈಸೂರು ಸ್ಯಾಂಡಲ್ ಸೋಪ್ ತನ್ನ ಸಾಬೂನುಗಳಲ್ಲಿ ಶುದ್ಧ ಶ್ರೀಗಂಧದ ಎಣ್ಣೆಯನ್ನು ಬಳಸುವುದಕ್ಕೆ ಹೆಸರುವಾಸಿಯಾಗಿದೆ. ಸರ್ಕಾರದ ಸ್ವಾದೀನದಲ್ಲಿರುವ ಕಂಪನಿ ಉತ್ತಮ ವಹಿವಾಟು ನಡೆಸಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯವೂ ಹೌದು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

7 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

7 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

9 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

12 hours ago